ಕರ್ನಾಟಕದಲ್ಲಿವೆ 22 ಲಕ್ಷ ಅನರ್ಹ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌

Published : Oct 01, 2024, 04:29 AM IST
ಕರ್ನಾಟಕದಲ್ಲಿವೆ 22 ಲಕ್ಷ ಅನರ್ಹ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌

ಸಾರಾಂಶ

ಕುಟುಂಬ ತಂತ್ರಾಂಶದಿಂದ ಪಡೆದ ಅನರ್ಹ ಪಡಿತರ ಚೀಟಿಯನ್ನು 10 ದಿನದೊಳಗೆ ಮುಕ್ತಾಯಗೊಳಿಸಬೇಕು. ಕಚೇರಿಯಿಂದ ಒದಗಿಸಿರುವ ಗೂಗಲ್ ಡ್ರೈವ್‌ನಲ್ಲಿ ಪ್ರತಿನಿತ್ಯ ಮಾಹಿತಿಯನ್ನು ಅಪ್ಲೇಟ್ ಮಾಡಬೇಕು. ಪರಿಶೀಲನೆ ಕಾರ್ಯ ಮುಕ್ತಾಯಗೊಂಡ ನಂತರ ಕೇಂದ್ರ ಕಚೇರಿಗೆ ವಿವರ ವರದಿ ಸಲ್ಲಿಸುವಂತೆ ರಾಜ್ಯದ ಎಲ್ಲ ಜಂಟಿ ಮತ್ತು ಉಪನಿರ್ದೇಶಕರಿಗೆ ಸೂಚಿಸಿದ ಆಹಾರ ಇಲಾಖೆ ಆಯುಕ್ತರು 

ಬೆಂಗಳೂರು(ಅ.01): ಅನರ್ಹ ಪಡಿತರ ಚೀಟಿಗಳನ್ನು ರದ್ದು ಪಡಿಸುವ ಕಾರ್ಯಕ್ಕೆ ವೇಗ ನೀಡಿರುವ ಆಹಾರ ಇಲಾಖೆ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕುಟುಂಬ ತಂತ್ರಾಂಶದ ಮೊರೆಹೋಗಿದ್ದು ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್ ಕಾರ್ಡ್‌ಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಿದೆ. 

ಕುಟುಂಬ ತಂತ್ರಾಂಶದಿಂದ ಸರ್ಕಾರ ನಗದಿ ಪಡಿಸಿರುವ ಮಾನದಂಡಗಳ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ, ಇ ಆಡಳಿತ ಕೇಂದ್ರಕ್ಕೆ ಮನವಿ ಮಾಡಿತ್ತು. ಈ ತಂತ್ರಾಂಶದಿಂದ ದೊರೆತ ಮಾಹಿತಿಯಂತೆ 10,97,621 ಅನರ್ಹ ಬಿಪಿಎಲ್, ಅಂತ್ಯೋದಯ, 1,06,152 ಚೀಟಿಗಳು , 10,54,368 ಕಾರ್ಡ್‌ಗಳು 1.2 ಲಕ್ಷಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹಾಗೂ 4,272 ಚೀಟಿ ಕೆಜಿಐಡಿ, ಎಚ್‌ಆರ್‌ಎಂಎಸ್‌ ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ-ಆಡಳಿತ ಕೇಂದ್ರ ಪತ್ತೆ ಹಚ್ಚಿದೆ. 

20 ಲಕ್ಷ ಬಿಪಿಎಲ್‌ ಕಾರ್ಡ್‌ಗಳ ರದ್ದತಿಗೆ ಸರ್ಕಾರದಿಂದ ಚಿಂತನೆ..!

ಕುಟುಂಬ ತಂತ್ರಾಂಶದಿಂದ ಪಡೆದ ಅನರ್ಹ ಪಡಿತರ ಚೀಟಿಯನ್ನು 10 ದಿನದೊಳಗೆ ಮುಕ್ತಾಯಗೊಳಿಸಬೇಕು. ಕಚೇರಿಯಿಂದ ಒದಗಿಸಿರುವ ಗೂಗಲ್ ಡ್ರೈವ್‌ನಲ್ಲಿ ಪ್ರತಿನಿತ್ಯ ಮಾಹಿತಿಯನ್ನು ಅಪ್ಲೇಟ್ ಮಾಡಬೇಕು. ಪರಿಶೀಲನೆ ಕಾರ್ಯ ಮುಕ್ತಾಯಗೊಂಡ ನಂತರ ಕೇಂದ್ರ ಕಚೇರಿಗೆ ವಿವರ ವರದಿ ಸಲ್ಲಿಸುವಂತೆ ರಾಜ್ಯದ ಎಲ್ಲ ಜಂಟಿ ಮತ್ತು ಉಪನಿರ್ದೇಶಕರಿಗೆ ಆಹಾರ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. 

ವಾರ್ಷಿಕ 1.20 ಲಕ್ಷ ರು.ಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರ, ಮನೆಯಲ್ಲಿ ಕಾರು ಹೊಂದಿರುವ, ಆದಾಯ ತೆರಿಗೆ ಪಾವತಿಸುವವರು, ಏಳೂವರೆ ಎಕರೆ ಒಣ ಅಥವಾ ನೀರಾವರಿ ಭೂಮಿ ಹೊಂದಿರುವವರು, ಅನುದಾನಿತ- ಅನುದಾನರಹಿತ ಕಾಲೇಜು ನೌಕರರು, ನೊಂದಾಯಿತ ಗುತ್ತಿಗೆದಾರರು, ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು, ಸ್ವಂತಕ್ಕಾಗಿ ಒಂದು ಆಟೋರಿಕ್ಷಾ ಹೊರತುಪಡಿಸಿ 100 ಸಿಸಿ ಮೇಲ್ಪಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಹೊಂದಿರುವುದು ಸೇರಿ 14 ಮಾನದಂಡ ಮುಂದಿಟ್ಟುಕೊಂಡು ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಗೆ ಇಲಾಖೆ ಮುಂದಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್