ಪರಪ್ಪನ ಜೈಲಿನಲ್ಲಿ 22 ಕೈದಿಗಳಿಗೆ ಕೊರೋನಾ!

Published : Jul 02, 2020, 07:15 AM ISTUpdated : Jul 02, 2020, 09:01 AM IST
ಪರಪ್ಪನ ಜೈಲಿನಲ್ಲಿ 22 ಕೈದಿಗಳಿಗೆ ಕೊರೋನಾ!

ಸಾರಾಂಶ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ಸೋಂಕು| ಪರಪ್ಪನ ಜೈಲಿನಲ್ಲಿ 22 ಕೈದಿಗಳಿಗೆ ಕೊರೋನಾ

ಬೆಂಗಳೂರು(ಜು.02): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ಸೋಂಕು ವ್ಯಾಪಿಸಿದ್ದು, ಇದೇ ಮೊದಲ ಬಾರಿಗೆ 22 ವಿಚಾರಣಾಧೀನ ಕೈದಿಗಳಲ್ಲಿ ಬುಧವಾರ ಸೋಂಕು ಕಾಣಿಸಿಕೊಂಡಿದೆ. ಇತ್ತೀಚೆಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಗರ ಹಾಗೂ ನೆರೆಹೊರೆ ಜಿಲ್ಲೆಗಳಲ್ಲಿ ಬಂಧಿತರಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಗಳು ಸೋಂಕಿತರಾಗಿದ್ದಾರೆ. ಆದರೆ ಸೋಂಕಿನ ಮೂಲ ಪತ್ತೆಯಾಗಿಲ್ಲ. ಹಾಗೆ ಕೊರೋನಾ ಸೋಂಕಿನ ಯಾವುದೇ ಲಕ್ಷಣಗಳು ಸಹ ಪರೀಕ್ಷೆಯಲ್ಲಿ ಕಂಡು ಬಾರದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

'ಆಗಸ್ಟ್‌ನಲ್ಲಿ ಕೊರೋನಾ ತಾರಕಕ್ಕೆ: ಬೆಂಗಳೂರಿನಲ್ಲಿ 40000 ಕೇಸ್‌!'

ಸೋಂಕು ಧೃಡಪಟ್ಟಹಿನ್ನೆಲೆಯಲ್ಲಿ ನಿಗದಿತ ಕೋವಿಡ್‌ ಆಸ್ಪತ್ರೆಗೆ ವಿಚಾರಣಾಧೀನ ಕೈದಿಗಳನ್ನು ಕಾರಾಗೃಹದ ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಎರಡು ತಿಂಗಳ ಅವಧಿಯಲ್ಲಿ ಹೊಸದಾಗಿ ಜೈಲು ಸೇರಿದ ಆರೋಪಿಗಳಿಗೆ ಕ್ವಾರಂಟೈನ್‌ಗೊಳಪಡಿಸಲಾಗಿದ್ದು, ಅವರ ವೈದ್ಯಕೀಯ ವರದಿ ನಿರೀಕ್ಷಿಸಲಾಗಿದೆ.

ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ರಾಜ್ಯ ಬಂಧೀಖಾನೆ ಇಲಾಖೆಯ ಡಿಜಿಪಿ ಅಲೋಕ್‌ ಮೋಹನ್‌, ಕಾರಾಗೃಹಗಳಲ್ಲಿ ಸೋಂಕು ಹರಡುವಿಕೆ ತಡೆಗೆ ಮುನ್ನಚ್ಚರಿಕೆ ವಹಿಸಲಾಗಿದೆ. ಜೈಲಿಗೆ ಹೊಸದಾಗಿ ಬರುವ ವಿಚಾರಣಾಧೀನ ಕೈದಿಗಳನ್ನು ಪ್ರತ್ಯೇಕವಾಗಿ ಬಂಧನದಲ್ಲಿಡಲಾಗುತ್ತದೆ. ಬಂದ ದಿನ, ಆನಂತರ 12 ದಿನ ಹಾಗೂ 22 ದಿನ ಹೀಗೆ ಮೂರು ಹಂತದಲ್ಲಿ ಹೊಸಬರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತದೆ. ಅಂತೆಯೇ ಎರಡನೇ ಹಂತದ ತಪಾಸಣೆಗೊಳಗಾಗಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 22 ಮಂದಿಗೆ ಸೋಂಕು ಪತ್ತೆಯಾಗಿದೆ. ಇದೇ ಮೊದಲ ಬಾರಿಗೆ ಕಾರಾಗೃಹದಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಡಿಜಿಪಿ ವಿವರಿಸಿದರು.

7ರಿಂದ ಸರ್ಕಾರದಿಂದಲೇ ಲಾಕ್‌ಡೌನ್? ಸ್ವಯಂ ಲಾಕ್‌ಡೌನ್‌ ನಿರ್ಧಾರಕ್ಕೆ ತಿಲಾಂಜಲಿ!

ಕಾರಾಗೃಹಗಳನ್ನು ಸ್ಯಾನಿಟೈಸ್‌ ಮಾಡಿಸಲಾಗಿದೆ. ಹೊಸಬರನ್ನು ಮೂರು ಹಂತದ ತಪಾಸಣೆ ನಡೆಸಿದ ಬಳಿಕವೇ ಪ್ರತ್ಯೇಕ ವಾಸದಿಂದ ಬೇರೆ ಬ್ಯಾರಕ್‌ಗಳಿಗೆ ಸ್ಥಳಾಂತರಿಸಲಾಗುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್