ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ಈವರೆಗೆ 245 ಕೋಟಿ ನಗದು, ವಸ್ತು ಜಪ್ತಿ

Published : Apr 22, 2023, 02:00 AM IST
ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ಈವರೆಗೆ 245 ಕೋಟಿ ನಗದು, ವಸ್ತು ಜಪ್ತಿ

ಸಾರಾಂಶ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರು. ನಗದು, 19.31 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರು. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಏ.22):  ಚುನಾವಣಾ ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿರುವ ಚುನಾವಣಾ ಆಯೋಗವು ಶುಕ್ರವಾರ 72.30 ಲಕ್ಷ ರು. ನಗದು ವಶಪಡಿಸಿಕೊಂಡಿದೆ. ನಿಪ್ಪಾಣಿ ಕ್ಷೇತ್ರದಲ್ಲಿ 25 ಲಕ್ಷ ರು. ಮೌಲ್ಯದ 23,880 ಲೀಟರ್‌ ಮದ್ಯವನ್ನು ಮತ್ತು ಶಿವಾಜಿನಗರ ಕ್ಷೇತ್ರದಲ್ಲಿ 58.59 ಲಕ್ಷ ರು. ಮೌಲ್ಯದ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ಚಿಕ್ಕಪೇಟೆ ಕ್ಷೇತ್ರದಲ್ಲಿ 25 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 80.23 ಕೋಟಿ ರು. ನಗದು, 19.31 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳು, 73.80 ಕೋಟಿ ರು. ಮೌಲ್ಯದ 145.55 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 245.76 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದೆ.

52.23 ಕೋಟಿ ರು. ಮೌಲ್ಯದ 13.94 ಲಕ್ಷ ಲೀಟರ್‌ ಮದ್ಯ, 16.10 ಕೋಟಿ ರು. ಮೌಲ್ಯದ 1,084.03 ಕೆ.ಜಿ. ಮಾದಕ ವಸ್ತುಗಳು,77.87 ಕೋಟಿ ರು. ಮೌಲ್ಯದ 727.45 ಕೆ.ಜಿ. ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬಳ್ಳಾರಿ: ಅಕ್ರಮವಾಗಿ ಸಾಗಿಸುತ್ತಿದ್ದ ₹76 ಸಾವಿರ ಮೌಲ್ಯದ ಮದ್ಯ, ಕುಕ್ಕರ್ ವಶ

1,795 ಎಫ್‌ಐಆರ್‌ ದಾಖಲಿಸಲಾಗಿದೆ. 69,656 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 4,529 ಪ್ರಕರಣಗಳನ್ನು ದಾಖಲಿಸಲಾಗಿದೆ. 7,238 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 12,107 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ವೀರವೈಶ ಲಿಂಗಾಯತ ಸಮಾಜ ಒಡೆದಾಳಲು ಯತ್ನ: ವಿಜಯೇಂದ್ರ