ಭಾರೀ ಮಳೆ: ಕರ್ನಾಟಕದ ಡ್ಯಾಂಗಳಲ್ಲಿ ಕಳೆದ ಸಲಕ್ಕಿಂತ ಈ ಬಾರಿ ಶೇ.25 ಹೆಚ್ಚು ನೀರು

Published : Jul 12, 2024, 10:12 AM IST
ಭಾರೀ ಮಳೆ: ಕರ್ನಾಟಕದ ಡ್ಯಾಂಗಳಲ್ಲಿ ಕಳೆದ ಸಲಕ್ಕಿಂತ ಈ ಬಾರಿ ಶೇ.25 ಹೆಚ್ಚು ನೀರು

ಸಾರಾಂಶ

ಕರಾವಳಿ, ಮಲನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಜುಲೈ ತಿಂಗಳ ಆರಂಭದಿಂದಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. 

ಬೆಂಗಳೂರು(ಜು.12):  ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚುತ್ತಿದ್ದಂತೆ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ನೀರಿನ ಪ್ರಮಾಣದ  ಏರಿಕೆಯಾಗಿದೆ. ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಈ ಬಾರಿ ಜಲಾಶಯಗಳಲ್ಲಿ ಶೇ. 25ರಷ್ಟು ಹೆಚ್ಚಿನ ನೀರು ಸಂಗ್ರಹವಾಗಿದೆ. 

ಕರಾವಳಿ, ಮಲನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಜುಲೈ ತಿಂಗಳ ಆರಂಭದಿಂದಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದಾಗಿ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. 

ವರುಣನ ಅಬ್ಬರಕ್ಕೆ ಕಂಗೆಟ್ಟ ಕರಾವಳಿ, ಮಲೆನಾಡು: ಇನ್ನೂ 5 ದಿನ ಗಾಳಿ ಸಹಿತ ಭಾರೀ ಮಳೆ

ಜು. 11ಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ 20 ಜಲಾಶಯಗಳಲ್ಲಿ 192.93 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆಯಾಗಿದ್ದು, ಶೇ. 36.25ರಷ್ಟು ಭರ್ತಿಯಾಗಿದೆ. ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ 47.59 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆಯಾಗಿದ್ದು, ಶೇ. 46ರಷ್ಟು ಭರ್ತಿಯಾಗಿದೆ. ಅದೇ ರೀತಿ ಕೃಷ್ಣಾ ಕೊಳ್ಳದ 16 ಜಲಾಶಯಗಳಲ್ಲಿ 145.34 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆಯಾಗಿ, ಶೇ. 34ರಷ್ಟು ಭರ್ತಿಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ
ಡ್ರಗ್‌ ಪೆಡ್ಲರ್‌ಗಳಿಗೆ ಬೆಂಗಳೂರೇ ದೊಡ್ಡ ಟಾರ್ಗೆಟ್‌: ಚಾಕೋಲೆಟ್‌, ಕಾಫಿ ಪುಡಿ ಹೆಸರಲ್ಲಿ ಡ್ರಗ್ಸ್‌ ಸಾಗಾಟ