ಕೇಂದ್ರ ಸರ್ಕಾರದಿಂದ 25 ಟವರ್‌ ಮಂಜೂರು: ಸಂಸದ ಬಿವೈ ರಾಘವೇಂದ್ರ

Published : Jun 24, 2023, 08:36 PM IST
ಕೇಂದ್ರ ಸರ್ಕಾರದಿಂದ 25 ಟವರ್‌ ಮಂಜೂರು: ಸಂಸದ ಬಿವೈ ರಾಘವೇಂದ್ರ

ಸಾರಾಂಶ

ಹಳ್ಳಿಹೊಳೆ, ಕಾಲ್ತೋಡು ಸೇರಿದಂತೆ ಬೈಂದೂರು ಕ್ಷೇತ್ರದ ಕುಗ್ರಾಮಗಳಿಗೆ ಈಗಾಗಲೇ 25 ಟವರ್‌ಗಳು ಕೇಂದ್ರ ಸರ್ಕಾರದಿಂದ ಮಂಜೂರಾಗಿದೆ. ಆದಷ್ಟುಬೇಗ ಕಾಮಗಾರಿ ಪೂರ್ಣಗೊಂಡು ಜನರಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಕುಂದಾಪುರ (ಜೂ.24) ಹಳ್ಳಿಹೊಳೆ, ಕಾಲ್ತೋಡು ಸೇರಿದಂತೆ ಬೈಂದೂರು ಕ್ಷೇತ್ರದ ಕುಗ್ರಾಮಗಳಿಗೆ ಈಗಾಗಲೇ 25 ಟವರ್‌ಗಳು ಕೇಂದ್ರ ಸರ್ಕಾರದಿಂದ ಮಂಜೂರಾಗಿದೆ. ಆದಷ್ಟುಬೇಗ ಕಾಮಗಾರಿ ಪೂರ್ಣಗೊಂಡು ಜನರಿಗೆ ಇದರ ಪ್ರಯೋಜನ ಸಿಗಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಶುಕ್ರವಾರ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ನಡೆದ ಸಂಯುಕ್ತ ಸಮಾವೇಶದ ಬಳಿಕ ಸಂಸದರ ನಿಧಿಯಿಂದ ವಿಶೇಷಚೇತನರಿಗೆ ಸ್ಕೂಟರ್‌ ಕೀ ಹಸ್ತಾಂತರಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ದೇಶ ಕಟ್ಟುವಲ್ಲಿ ಯುವಜನತೆ ಜವಾಬ್ದಾರಿ ದೊಡ್ಡದು: ಸಂಸದ ಬಿ.ವೈ.ರಾಘವೇಂದ್ರ

ಬೈಂದೂರು ಕ್ಷೇತ್ರದಲ್ಲಿ ನೆಟ್‌ವರ್ಕ್ ಸಮಸ್ಯೆಯ ಕುರಿತು ಅನೇಕ ಬಾರಿ ಇಲ್ಲಿನ ಮುಖಂಡರು ನನ್ನ ಗಮನಕ್ಕೆ ತಂದಿದ್ದಾರೆ. ಜನರ ಸಮಸ್ಯೆಗಳನ್ನು ಈಡೇರಿಸುವುದು ನನ್ನ ಜವಾಬ್ದಾರಿ. ಇನ್ನು 25-30 ಟವರ್‌ಗೆ ಅನುದಾನ ಸಿಗುವ ನಿರೀಕ್ಷೆಯಿದ್ದು, ಮೊದಲ ಪಟ್ಟಿಯಲ್ಲಿ ತಪ್ಪಿ ಹೋದ ಗ್ರಾಮಗಳನ್ನು ಸೇರಿಸಲು ಅವಕಾಶವಿದೆ ಎಂದರು.

ಸರ್ಕಾರಿ ಶಾಲೆಗಳ ಶಿಕ್ಷಕರ ವರ್ಗಾವಣೆಯಿಂದ ಸಮಸ್ಯೆಗಳಾಗುತ್ತಿದೆ. ಪ್ರತೀ ವರ್ಷವೂ ಶಿಕ್ಷಕರ ಕೌನ್ಸೆಲಿಂಗ್‌ ನಡೆಯುತ್ತದೆ. ಆದರೆ ಪರ್ಯಾಯ ವ್ಯವಸ್ಥೆ ಮಾಡದೇ ಏಕಾಏಕಿ ವರ್ಗಾವಣೆ ಮಾಡುವುದು ಸರಿಯಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದರು.

ಸಾಕಾರಗೊಂಡ ಶಿವಮೊಗ್ಗ ಜನತೆಯ ರೈಲ್ವೆ ಕನಸು, ಶಿವಮೊಗ್ಗ-ಬೆಂಗಳೂರು ನಡುವೆ ಒಂದೇ ಭಾರತ ರೈಲು ಸೇವೆ

ಬೈಂದೂರಿನಲ್ಲಿ ಪ್ರಸ್ತಾವಿತ ಕಾಲು ಸಂಕಗಳು ಇನ್ನೂ ಪೂರ್ಣಗೊಳ್ಳದಿರುವ ಕುರಿತಂತೆ ಮಾತನಾಡಿದ ಸಂಸದರು, 10 ಕೋಟಿ ರು.. ವೆಚ್ಚದಲ್ಲಿ 102 ಕಾಲು ಸಂಕಗಳನ್ನು ಮಾಡುವ ಯೋಜನೆ ಕೈಗೊಳ್ಳಲಾಗಿತ್ತು. ಅದರಲ್ಲಿ ಕೆಲವು ಆಗಿದೆ. ಇನ್ನು ಕೆಲವು ಆಗಿಲ್ಲ. ಆದರೆ ಈಗ ಸರ್ಕಾರ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿದಿದ್ದು, ಇದರಿಂದ ವಿಳಂಬವಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದು, ಬಜೆಟ್‌ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆ ಬಳಿಕ ಈ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭ ಶಾಸಕ ಗುರುರಾಜ್‌ ಗಂಟಿಹೊಳೆ, ಮುಖಂಡರಾದ ಅತುಲ್‌ ಕುಮಾರ್‌ ಶೆಟ್ಟಿ, ಸಾಮ್ರಾಟ್‌ ಶೆಟ್ಟಿ, ವೆಂಕಟೇಶ ಕಿಣಿ, ಕೃಷ್ಣಪ್ರಸಾದ್‌ ಅಡ್ಯಂತಾಯ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್