
ಬೆಂಗಳೂರು, (ಏ.25): ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 26 ಜನರು ಕೊರೊನಾ ಸೋಂಕಿಗೊಳಗಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.
ಇಲ್ಲಿವರೆಗೆ 158 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 18 ಜನರು ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ಇನ್ನು ಚಿಕಿತ್ಸೆಯಿಂದ ಗುಣಮುಖರಾದವರು ಮತ್ತು ಸಾವಿಗೀಡಾದವರ ಹೊರತಾಗಿ ರಾಜ್ಯದಲ್ಲಿ 324 ಆ್ಯಕ್ಟಿವ್ ಪ್ರಕರಣಗಳಿವೆ. ಇವುಗಳಲ್ಲಿ 317 ಮಂದಿ ಸಾಮಾನ್ಯ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಬುಲೆಟಿನ್ ಹೊರಡಿಸಿದೆ.
ಶನಿವಾರ ಜಿಲ್ಲಾವಾರು ಪತ್ತೆಯಾದ ಸೋಂಕಿತರ ಅಂಕಿ ಸಂಖ್ಯೆ
ಬೆಂಗಳೂರು- 13
ಬೆಳಗಾವಿ- 9
ಮಂಡ್ಯ- 1
ಮೈಸೂರು- ನಂಜನಗೂಡು- 1
ಚಿಕ್ಕಬಳ್ಳಾಪುರ- 1 ಮತ್ತು ದಕ್ಷಿಣ ಕನ್ನಡದಲ್ಲಿ ಒಬ್ಬರು ಸೋಂಕಿಗೆ ಒಳಗಾಗಿರುವುದು ದೃಢಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ