
ಬೆಂಗಳೂರು(ಮೇ.21): ಪ್ರಸಕ್ತ ವರ್ಷದ 5 ತಿಂಗಳಲ್ಲಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಆನೆಗಳ ಸಾವು ಹಾಗೂ ವನ್ಯಜೀವಿ-ಮಾನವ ಸಂಘರ್ಷದಲ್ಲಿ ಸಾವನ್ನಪ್ಪಿದವರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿರುವ ಅರಣ್ಯ ಇಲಾಖೆ, ಜನವರಿಯಿಂದ ಮೇ ತಿಂಗಳವರೆಗೆ ರಾಜ್ಯದಲ್ಲಿ 25 ಆನೆಗಳು ಹಾಗೂ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.
ಅರಣ್ಯ ಇಲಾಖೆ ಮಾಹಿತಿಯಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ಸಾವನ್ನಪ್ಪಿರುವ 25 ಆನೆಗಳ ಪೈಕಿ 23 ಆನೆಗಳು ಸ್ವಾಭಾವಿಕವಾಗಿ ಸಾವನ್ನಪ್ಪಿದ್ದರೆ, ಎರಡು ಆನೆಗಳು ಬೇಟೆ ಅಥವಾ ಬೇರೆ ಕಾರಣದಿಂದ ಅಸಹಜ ಸಾವನ್ನಪ್ಪಿವೆ. ಅದೇ ರೀತಿ ವನ್ಯಜೀವಿ ದಾಳಿಯಿಂದ 26 ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಆನೆ ದಾಳಿಯಿಂದ 22 ಹಾಗೂ ಇತರ ಪ್ರಾಣಿಗಳ ದಾಳಿಯಿಂದ ನಾಲ್ಕು ಮಂದಿ ಮರಣಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
Mangaluru: ಪಶ್ಚಿಮ ಘಟ್ಟದ ಅಭಿವೃದ್ಧಿ ಯೋಜನೆಗೆ ಆನೆ ಕಾರಿಡಾರ್ ಬಲಿ!
ಆನೆ ಸಾವಿನ ವಿವರ: ತಿಂಗಳು ಸಾವನ್ನಪ್ಪಿದ ಆನೆಗಳು
ಜನವರಿ 02
ಫೆಬ್ರವರಿ 06
ಮಾರ್ಚ್ 08
ಏಪ್ರಿಲ್ 03
ಮೇ 06
ಒಟ್ಟು 25
ಸಾವನ್ನಪ್ಪಿದ ಜನರ ವಿವರ: ತಿಂಗಳು ಆನೆಯಿಂದ ಸಾವನ್ನಪ್ಪಿದವರ ಸಂಖ್ಯೆ ಇತರ ಪ್ರಾಣಿಗಳಿಂದ ಸಾವು
ಜನವರಿ 03 00
ಫೆಬ್ರವರಿ 04 00
ಮಾರ್ಚ್ 07 01
ಏಪ್ರಿಲ್ 07 02
ಮೇ 01 01
ಒಟ್ಟು 22 04
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ