
ಬೆಂಗಳೂರು (ಜೂ.12): ರಾಜ್ಯದಲ್ಲಿ ಪರಿಶಿಷ್ಟಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಪ್ರಸಕ್ತ 2021-22ನೇ ಸಾಲಿನಲ್ಲಿ ಎಸ್ಸಿಎಸ್ಟಿ ಮತ್ತು ಟಿಎಸ್ಪಿ ಯೋಜನೆಯಡಿ 26,005 ಕೋಟಿ ರು. ಅನುದಾನವನ್ನು ಹಂಚಿಕೆ ಮಾಡಲಾಗಿದ್ದು, ಅನುಮೋದನೆಗಾಗಿ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಪರಿಷತ್ ಸಭೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಎರಡು ದಿನಗಳ ಅವಧಿ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಲು ತ್ವರಿತವಾಗಿ ಕರಡು ಕ್ರಿಯಾಯೋಜನೆಯನ್ನು ತಯಾರಿಸುವಂತೆ ನೋಡಲ್ ಏಜೆನ್ಸಿಯಲ್ಲಿರುವ ವಿವಿಧ 35 ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಡಲ್ ಏಜೆನ್ಸಿಗಳ ಅಧ್ಯಕ್ಷರೂ ಆಗಿರುವ ಸಚಿವರು ಸೂಚಿಸಿದರು.
SC, ST ಭೂಮಿ ಯಾರು ಬೇಕಾದರೂ ಮಾರುವಂತಿಲ್ಲ: ಹೈಕೋರ್ಟ್
ಕಳೆದ ಸಾಲಿನ ಆರ್ಥಿಕ ಹಾಗೂ ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಕಳೆದ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ 25,916 ಕೋಟಿ ರು. ಅಂತಿಮವಾಗಿ ಹಂಚಿಕೆಯಾಗಿತ್ತು. ಈ ಪೈಕಿ 24,568 ಕೋಟಿ ರು.ಗಳನ್ನು (ಶೇ.95) ಪರಿಶಿಷ್ಟಜಾತಿ ಮತ್ತು ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ.
ಶೋಷಿತರ ಆರ್ಥಿಕ ಸಬಲೀಕರಣಕ್ಕೆ ಬದ್ಧ: ಸಿಎಂ ಯಡಿಯೂರಪ್ಪ ...
ಈ 35 ಇಲಾಖೆಗಳು ಪರಿಶಿಷ್ಟಜಾತಿ ಮತ್ತು ಪಂಗಡ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗುವಂಥ ಯೋಜನೆ/ಕಾರ್ಯಕ್ರಮಗಳ ಕರಡು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು. ಎಲ್ಲಾ ಇಲಾಖೆಗಳ ಕ್ರೋಢಿಕೃತ ಕರಡು ಕ್ರಿಯಾಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು. ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಿ, ಅಂತಿಮವಾಗಿ ಅನುಮೋದನೆಯನ್ನು ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ