ಅವನ ಬ್ಯಾಗ್‌ನಲ್ಲಿ ಬಾಂಬ್‌ ಇದೆ, ಮುಂಬೈಗೆ ಹೋಗ್ತಿರೋ ಗೆಳೆಯನನ್ನ ತಡೆಯಿರಿ: ಬೆಂಗಳೂರು ಏರ್ಪೋರ್ಟ್‌ಗೆ ಯುವತಿ ಕರೆ

Published : Jul 07, 2024, 03:39 PM IST
ಅವನ ಬ್ಯಾಗ್‌ನಲ್ಲಿ ಬಾಂಬ್‌ ಇದೆ, ಮುಂಬೈಗೆ ಹೋಗ್ತಿರೋ ಗೆಳೆಯನನ್ನ ತಡೆಯಿರಿ: ಬೆಂಗಳೂರು ಏರ್ಪೋರ್ಟ್‌ಗೆ ಯುವತಿ ಕರೆ

ಸಾರಾಂಶ

ನನ್ನ ಗೆಳೆಯ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾನೆ. ಆತನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿ, ಪೊಲೀಸರ ಕೈಗೆ ತಗ್ಲಾಕೊಂಡಿದ್ದಾಳೆ.

ಬೆಂಗಳೂರು: 29 ವರ್ಷದ ಯುವತಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru’s Kempegowda International Airport) ಕರೆ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆ ಮಾಡಿದ ಯುವತಿ, ಆತನ ಬ್ಯಾಗ್‌ನಲ್ಲಿ ಬಾಂಬ್ ಇದ್ದು, ಮುಂಬೈಗೆ (Bengaluru To Mumbai) ತೆರಳುತ್ತಿದ್ದಾನೆ. ಆದಷ್ಟು ಬೇಗ ಆತನನ್ನು ತಡೆಯಿರಿ ಎಂದು ಹೇಳಿದ್ದಾಳೆ. ಜೂನ್ 26ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಸಿ ಕರೆ ಸಂಬಂಧ ಯುವತಿ ವಿರುದ್ಧ ಐಪಿಸಿ ಸೆಕ್ಸನ್ 505 (1)(B) ಅಡಿಯಲ್ಲಿ (ಸಾರ್ವಜನಿಕ ಕಿರುಕುಳಕ್ಕೆ ಕಾರಣವಾಗುವ ಹೇಳಿಕೆಗಳು) ಎಫ್‌ಐಆರ್ ದಾಖಲಾಗಿದೆ

ಯುವತಿಯನ್ನು ಪುಣೆ ಮೂಲದ ಇಂದ್ರಾ ರಾಜ್ವಾರ್ ಎಂದು ಗುರುತಿಸಲಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾಳೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಹಾಯವಾಣಿಗೆ ಕರೆ ಮಾಡಿದ ಇಂದ್ರಾ, ಬೆಂಗಳೂರಿನಿಂದ ಮುಂಬೈಗೆ ಪ್ರಯಾಣಿಸುತ್ತಿರುವ ಮಿರ್ ರಾಜಾ ಮೆಹ್ದಿ ಹೆಸರಿನ ಪ್ರಯಾಣಿಕ ಬಾಂಬ್ ಸಾಗಿಸುತ್ತಿದ್ದಾನೆ. ಆತ ನನ್ನ ಬಾಯ್‌ಫ್ರೆಂಡ್ ಎಂದು ಇಂದ್ರಾ ಹೇಳಿಕೊಂಡಿದ್ದಳು. 

ನಾಲ್ಕು ವರ್ಷದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬೆಂಗಳೂರಿನಿಂದ ಥಾಯ್ಲೆಂಡ್‌ಗೆ ವಿಮಾನ ಹತ್ತುವಾಗ ಪತ್ತೆ!

ಕರೆ ಮಾಡಿದವಳು ಏರ್‌ಪೋರ್ಟ್‌ನಲ್ಲಿಯೇ ಇದ್ದಳು!

ಕೂಡಲೇ ಅಲರ್ಟ್ ಆದ ಏರ್‌ಪೋರ್ಟ್ ಸಿಬ್ಬಂದಿ ಮಿರ್ ರಾಜ್ ಮೆಹ್ದಿಯನ್ನು ತಡೆದು ಆತನ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ. ಆದರೆ ಬ್ಯಾಗ್‌ನಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆ ಇದೊಂದು ಹುಸಿಕರೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇದೇ ಸಮಯದಲ್ಲಿ ಇಂದ್ರಾ ಸಹ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾಳೆ. ಇಂದ್ರಾ ಮತ್ತು ಮಿರ್ ರಾಜ್ ಮುಂಬೈಗೆ  ತೆರಳಲು ಬೇರೆ ಬೇರೆ ವಿಮಾನಗಳಲ್ಲಿ ಸೀಟ್ ಕಾಯ್ದಿರಿಸಿದ್ದರು. ಸಂಜೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು ನಿರ್ಗಮನದ ಲಾಂಜ್‌ನಲ್ಲಿ ಕುಳಿತು ಮಾತನಾಡಿದ್ದಾರೆ. ನಂತರ ಇಂದ್ರಾ ಏರ್‌ಪೋರ್ಟ್‌ಗೆ ಕರೆ ಮಾಡಿ ಸುಳ್ಳು ಮಾಹಿತಿ ನೀಡಿದ್ದಳು. 

ಗೆಳೆಯನ ಜೊತೆ ಜಗಳ ಆಗಿದ್ದಕ್ಕೆ ಹುಸಿ ಕರೆ

ಹುಸಿ ಕರೆ ಎಂದು ಸಾಬೀತು ಆಗ್ತಿದ್ದಂತೆ ಏರ್‌ಪೋರ್ಟ್ ಪೊಲೀಸರು ಯುವತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರ ಮುಂದೆ, ಮಿರ್ ರಾಜ್ ಹಾಗೂ ತನ್ನ ನಡುವೆ ಮನಸ್ತಾಪ ಉಂಟಾಗಿತ್ತು. ಆತ ಮುಂಬೈಗೆ ಹೋಗುವುದನ್ನು ತಡೆಯಲು ಹುಸಿ ಕರೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾಳೆ. ಸದ್ಯ ಪೊಲೀಸರು ಪ್ರಕರಣ ಸಂಬಂಧ ಎಲ್ಲಾ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿ ಹರಡಿದರೆ ಯಾವುದೇ ಪಕ್ಷದವರಾದರೂ ಬಿಡಬೇಡಿ: ಸಿಎಂ ಸಿದ್ದರಾಮಯ್ಯ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ
Karnataka News Live: ಪುರುಷರಿಗಿಲ್ಲದ ಕಟ್ಟುಪಾಡು ನಮಗೇಕೆ? - ಮಲೈಕಾ