ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಅಬ್ಬರ: ಬೆಚ್ಚಿಬೀಳಿಸಿದ ಏ.24ರ ಅಂಕಿ-ಸಂಖ್ಯೆ

Published : Apr 24, 2021, 08:36 PM ISTUpdated : Apr 24, 2021, 08:46 PM IST
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ಅಬ್ಬರ: ಬೆಚ್ಚಿಬೀಳಿಸಿದ ಏ.24ರ ಅಂಕಿ-ಸಂಖ್ಯೆ

ಸಾರಾಂಶ

 ರಾಜ್ಯದಲ್ಲಿ ಕೋವಿಡ್ ಎರಡನೇ  ಅಲೆ ತೀವ್ರತೆ ಹೆಚ್ಚಿದ್ದು, ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿಯೇ ಸಾಗಿದೆ. ಇನ್ನು ಏ.24ರ ಅಂಕಿ ಸಂಖ್ಯೆ ಈ ಕೆಳಗಿನಂತಿದೆ ನೋಡಿ

ಬೆಂಗಳೂರು, (ಏ.24): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಅಟ್ಟಹಾಸ ಇಂದೂ (ಶನಿವಾರ) ಮುಂದುವರೆದಿದ್ದು,  ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 29438 ಹೊಸ ಕೇಸ್‍ಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 234483ಕ್ಕೆ ಏರಿಕೆಯಾಗಿದೆ.

 ಶನಿವಾರ 9058 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 208 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 14283ಕ್ಕೇರಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್ ಬಿಡುಗಡೆ ಮಾಡಿದೆ. 

ಕೊರೋನಾ 2ನೇ ಅಲೆ ಇಷ್ಟಕ್ಕೆ ನಿಲ್ಲೋದಿಲ್ಲ: ಶಾಕ್ ಕೊಟ್ಟ ಸುಧಾಕರ್

ಬೆಂಗಳೂರಿನಲ್ಲಿ ಅತೀ ಹೆಚ್ಚು :

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 17342 ಹೊಸ ಪ್ರಕರಣಗಳು ವರದಿಯಾಗಿವೆ.  4646 ಜನರು ಸೇರಿದಂತೆ ಇದುವರೆಗೆ 4,65,028 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ನಗರದಲ್ಲಿ 1,62,171 ಸಕ್ರಿಯ ಕೇಸ್‌ಗಳಿವೆ.

ಇನ್ನು ಸಿಲಿಕಾನ್ ಸಿಟಿಯಲ್ಲಿ ಮರಣಮೃದಂಗ ಮುಂದುವರೆದಿದ್ದು, ಶನಿವಾರ ಕಿಲ್ಲರ್ ಕೊರೋನಾಗೆ 149 ಜನ ಬಲಿಯಾಗಿದ್ದಾರೆ. ಹೀಗಾಗಿ ನಗರದಲ್ಲಿ ಕೊರೋನಾದಿಂದ ಸೋಂಕಿತರಾಗಿ ಸಾವನ್ನಪ್ಪಿದವರ ಸಂಖ್ಯೆ 5,723ಕ್ಕೆ ಏರಿಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ