ಗ್ರಾಪಂ 2ನೇ ಹಂತದ ಸಮರ: ಇಂದು ಮನೆಮನೆ ಪ್ರಚಾರ ಕಸರತ್ತು

Kannadaprabha News   | Asianet News
Published : Dec 26, 2020, 09:51 AM IST
ಗ್ರಾಪಂ 2ನೇ ಹಂತದ ಸಮರ: ಇಂದು ಮನೆಮನೆ ಪ್ರಚಾರ ಕಸರತ್ತು

ಸಾರಾಂಶ

2709 ಗ್ರಾಪಂಗಳ 39378 ಸ್ಥಾನಕ್ಕೆ ನಾಳೆ ಮತದಾನ | ಬಹಿರಂಗ ಪ್ರಚಾರ ಅಂತ್ಯ, ಇಂದು ಮನೆಮನೆ ಪ್ರಚಾರ

ಬೆಂಗಳೂರು(ಡಿ.26): ರಾಜ್ಯದ ಗ್ರಾಮೀಣ ಭಾಗದಲ್ಲಿ ಚುನಾವಣಾ ಕಾವು ರಂಗೇರಿದ್ದು, ಗ್ರಾಮ ಪಂಚಾಯಿತಿಗಳ ಎರಡನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬಿದ್ದಿದೆ. ಶನಿವಾರ ಅಭ್ಯರ್ಥಿಗಳು ಮನೆ-ಮನೆ ಪ್ರಚಾರ ನಡೆಸಿ ಮತದಾರರ ಬಳಿಕ ಅಂತಿಮ ಹಂತದ ಕಸರತ್ತು ನಡೆಸಲಿದ್ದಾರೆ.

ಭಾನುವಾರದಂದು (ಡಿ.27) ರಾಜ್ಯದ 109 ತಾಲೂಕುಗಳ 2709 ಗ್ರಾಮ ಪಂಚಾಯಿತಿಗಳಲ್ಲಿನ 39,378 ಸ್ಥಾನಗಳಿಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದರೆ ಮಂಗಳವಾರ ನಡೆಯಲಿದ್ದು, ಡಿ.30ರಂದು ಮತ ಎಣಿಕೆ ನಡೆಯಲಿದೆ.

'ರಾಜ್ಯ ಸರ್ಕಾರದಿಂದ ಕನ್ನಡ ವಿರೋಧಿ ನೀತಿ'

ಒಟ್ಟು 43,291 ಸ್ಥಾನಗಳಿದ್ದು, ಈ ಪೈಕಿ 39,378 ಸ್ಥಾನಗಳಿಗೆ ಮತದಾನ ನಡೆಯಲಿದೆ. 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3,697 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ. ಇತ್ತೀಚೆಗೆ ಬೇರೆ ಬೇರೆ ಚುನಾವಣೆಗಳು ನಡೆದಿರುವ ಹಿನ್ನೆಲೆಯಲ್ಲಿ ಮತದಾರರಿಗೆ ಎಡಗೈ ಹೆಬ್ಬರಳಿಗೆ ಶಾಯಿ ಹಾಕಲಾಗುವುದು.

ಶನಿವಾರ ನಡೆಯುವ ಮನೆ-ಮನೆ ಪ್ರಚಾರವೇ ನಿರ್ಣಾಯಕವಾಗಿರುವುದರಿಂದ ಅಂತಿಮ ಹಂತದ ಪ್ರಚಾರವು ಕುತೂಹಲ ಕೆರಳಿಸಿದೆ. ಉದ್ಯೋಗ, ಶಿಕ್ಷಣಕ್ಕಾಗಿ ಹೊರ ಹೋಗಿರುವ ಬಹುತೇಕ ಮಂದಿ ಮತದಾನ ಚಲಾಯಿಸಲು ಗ್ರಾಮಗಳಿಗೆ ಹಿಂತಿರುಗುತ್ತಿದ್ದಾರೆ. ನೈಟ್‌ ಕಫäರ್‍ ಜಾರಿ ಘೋಷಿಸಿದ್ದ ಕಾರಣ ಎರಡನೇ ಹಂತದ ಮತದಾನಕ್ಕೆ ಹಿನ್ನೆಡೆಯಾಗುವ ಸಾಧ್ಯತೆ ಇತ್ತು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಸರ್ಕಾರವು ನೈಟ್‌ ಕಫä್ರ್ಯವನ್ನು ವಾಪಸ್‌ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮತದಾನಕ್ಕೆ ಹಿನ್ನಡೆಯಾಗುವ ಆತಂಕ ದೂರವಾಗಿದೆ. ಭಾನುವಾರ ಸಾರ್ವತ್ರಿಕ ರಜೆಯಾಗಿರುವ ಕಾರಣ ಮತದಾನಕ್ಕಾಗಿ ವೇತನ ಸಹಿತ ರಜೆಯನ್ನು ಘೋಷಣೆ ಮಾಡಿಲ್ಲ.

ಸಂಪುಟ ಕಸರತ್ತು ಸಂಕ್ರಾಂತಿ ನಂತರವೇ? ಬಜೆಟ್‌ ಬಳಿಕವೇ?

ಶುಕ್ರವಾರ ಸಂಜೆ ಬಹಿರಂಗ ಪ್ರಚಾರ ಅಂತಿಮಗೊಂಡಿರುವ ಹಿನ್ನೆಲೆಯನ್ನು ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದವರು ಕ್ಷೇತ್ರದಿಂದ ಹೊರ ಹೋಗುವಂತೆ ಚುನಾವಣೆ ಆಯೋಗವು ಸೂಚಿಸಿದೆ. ಮತಕ್ಷೇತ್ರದಲ್ಲಿ ಆಯೋಗದ ಸಿಬ್ಬಂದಿ ಓಡಾಟ ನಡೆಸಿದ್ದು, ಕ್ಷೇತ್ರಕ್ಕೆ ಸಂಬಂಧಪಡದವರು ಯಾರಾದರೂ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಇನ್ನು ಚುನಾವಣೆ ನಡೆಯುತ್ತಿರುವ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟವನ್ನು ಸಹ ನಿಷೇಧಿಸಲಾಗಿದೆ. ಅಕ್ರಮ ಮದ್ಯ ಸಾಗಾಣೆಯಾಗದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಗಡಿಭಾಗದಲ್ಲಿರುವ ಗ್ರಾಮಗಳಲ್ಲಿ ಪೊಲೀಸರು ಕಣ್ಗಾವಲು ಹಾಕಿದ್ದಾರೆ. ಜತೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ