
ಬೆಂಗಳೂರು(ಫೆ.21): ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಮಹಾರಾಷ್ಟ್ರದ ಕೆಲ ಜಿಲ್ಲೆ ಲಾಕ್ಡೌನ್ ಆಗಿದೆ. ನೆರೆ ರಾಜ್ಯಗಳಿಂದ ಇದೀಗ ಕರ್ನಾಟಕದಲ್ಲೂ ಕೊರೋನಾ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುತ್ತಿರುವವರಿಗೆ ನೆಗೆಟೀವ್ ರಿಪೋರ್ಟ್ ಕಡ್ಡಾಯವಾಗಿದೆ. ಇದರ ನಡುವೆ ಇಂದು ರಾಜ್ಯದಲ್ಲಿ ಪತ್ತೆಯಾದ ಹೊಸ ಕೊರೋನಾ ಪ್ರಕರಣ ಸಂಖ್ಯೆ 413 ಎಂದು ಆರೋಗ್ಯ ಇಲಾಖೆ ಹೇಳಿದೆ.
ಮತ್ತೆ ಆವರಿಸಿದ ಕೊರೋನಾ; ಮಹಾರಾಷ್ಟ್ರದ ಅಮರಾವತಿ 1 ವಾರ ಲಾಕ್ಡೌನ್!.
ಫೆ.21ರಂದು 413 ಹೊಸ ಪ್ರಕರಣಗಳು ಪತ್ತೆಯಾಗಿರುವ ಕಾರಣ ರಾಜ್ಯದಲ್ಲಿನ ಒಟ್ಟು ಕೊರೋನಾ ವೈರಸ್ ಪ್ರಕರಣ ಸಂಖ್ಯೆ 9,48,149ಕ್ಕೇರಿದೆ. ಇನ್ನು ಕೊರೋನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಯಾದ ಸಂಖ್ಯೆ 9,29,800. ಇನ್ನು ರಾಜ್ಯದಲ್ಲಿ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 6,036.
ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ 127. ಇನ್ನು ಫೆ.21ಕ್ಕೆ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2.
ಕೊರೋನಾ 2ನೇ ಅಲೆ; ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಸಲಹೆ!
ರಾಜ್ಯದಲ್ಲೂ ದಿನದಿಂದ ದಿನಕ್ಕೆ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜನರು ಮುಂಜಾಗ್ರತೆ ವಹಿಸಲು ಸೂಚಿಸಿಲಾಗಿದೆ. ಇಷ್ಟೇ ಅಲ್ಲ ಕೊರೋನಾ ಮಾರ್ಗಸೂಚಿನಗಳನ್ನು ಕಡ್ಡಾಯವಾಗಿ ಪಾಲಿಸಲು ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ