
ಬೆಂಗಳೂರು(ಆ.03): ಕೊರೋನಾ ಸೋಂಕಿತನ ಶವ ಹಸ್ತಾಂತರಿಸಲು 3.60 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಡಿವಾಳದ ಸೇಂಟ್ ಜಾನ್ಸ್ ಆಸ್ಪತ್ರೆ ವಿರುದ್ಧ ಆರೋಪ ಕೇಳಿ ಬಂದಿದೆ.
ಬೇಗೂರು ನಿವಾಸಿಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಜು.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜು.25ರಂದು ಅವರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಬಂದಿದೆ. ಈ ವೇಳೆ ಉಸಿರಾಟದ ಸಮಸ್ಯೆಯಿದೆ ಎಂದು ಐಸಿಯುಗೆ ಶಿಫ್ಟ್ ಮಾಡಿದ್ದ ಆಸ್ಪತ್ರೆ ಸಿಬ್ಬಂದಿ ಈ ವೇಳೆ ಸೋಂಕಿತನ ಕುಟುಂಬದಿಂದ 1.30 ಲಕ್ಷ ಕಟ್ಟಿಸಿಕೊಂಡಿದ್ದರು. ಆದರೆ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇದೀಗ ಮೃತದೇಹ ಹಸ್ತಾಂತರಿಸಲು .3.60 ಲಕ್ಷ ಪಾವತಿಸುವಂತೆ ಆಸ್ಪತ್ರೆ ಸಿಬ್ಬಂದಿ ಕೇಳುತ್ತಿದ್ದಾರೆ.
ಸೋಂಕಿತನ ಶವಸಂಸ್ಕಾರವನ್ನು ಪ್ರಶ್ನಿಸಿದ್ದೇ ತಪ್ಪಾಯ್ತು; ಮನೆ ಕಿಟಕಿ, ಗಾಜು ಪೀಸ್ ಪೀಸ್..!
ನಮ್ಮ ಬಳಿ ಹಣವಿಲ್ಲ. ಶವ ಕೊಡಿ ಎಂದು ಮೃತನ ಪುತ್ರಿ ಕಣ್ಣೀರಿಡುತ್ತಿದ್ದಾರೆ. ಆದರೆ, ಆಸ್ಪತ್ರೆ ಸಿಬ್ಬಂದಿ ಹಣ ಕೊಟ್ಟರಷ್ಟೇ ಶವ ಹಸ್ತಾಂತರಿಸುವುದಾಗಿ ಹೇಳುತ್ತಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ