ಸಚಿವ ರಾಮುಲುಗೆ ಮತ್ತೆ ಎದುರಾಯ್ತು ಮಹಾ ಸಂಕಷ್ಟ

Kannadaprabha News   | Asianet News
Published : Jul 27, 2021, 07:34 AM IST
ಸಚಿವ ರಾಮುಲುಗೆ ಮತ್ತೆ ಎದುರಾಯ್ತು ಮಹಾ ಸಂಕಷ್ಟ

ಸಾರಾಂಶ

3 ಕೋಟಿ ರು. ವಂಚನೆ ಪ್ರಕರಣದಿಂದ ಮಾಜಿ ಸಚಿವ ಬಿ.ಶ್ರೀರಾಮುಲುಗೆ ಮತ್ತೆ ಸಂಕಷ್ಟ   ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ವಿಚಾರಣೆಗೆ ಅಂಗೀಕರಿಸಿದೆ

ಬೆಂಗಳೂರು (ಜು.27): 3 ಕೋಟಿ ರು. ವಂಚನೆ ಪ್ರಕರಣದಿಂದ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಖುಲಾಸೆಗೊಳಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ವಿಚಾರಣೆಗೆ ಅಂಗೀಕರಿಸಿದ್ದು, ಆ.9ಕ್ಕೆ ವಿಚಾರಣೆ ನಿಗದಿಪಡಿಸಿದೆ.

 ಮೇಲ್ಮನವಿದಾರರ ಪರ ವಕೀಲ ಎಸ್‌.ಬಾಲನ್‌ ವಾದ ಮಂಡಿಸಿ, 2014ರಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿದ್ದ ಬಿ.ಶ್ರೀರಾಮುಲು ಅವರು ಎಲ್‌.ಸೋಮಣ್ಣ ಅವರಿಂದ 2.96 ಕೋಟಿ ರು. ಹಣ ಪಡೆದಿದ್ದರು.

ಶ್ರೀರಾಮುಲು ಪಿಎ ಪರ ಯೋಗೇಶ್ವರ್ ಬ್ಯಾಟಿಂಗ್: ವಿಜಯೇಂದ್ರಗೆ ಪರೋಕ್ಷ ಟಾಂಗ್ 

ಈ ಹಣ ವಾಪಸ್‌ ಕೇಳಿದಾಗ ವಿಧಾನ ಪರಿಷತ್‌ ಇಲ್ಲವೇ ಬಳ್ಳಾರಿ ಲೋಕಸಭೆ ಟಿಕೆಟ್‌ ನೀಡಲಾಗುವುದು. ಸಾಧ್ಯವಾಗದಿದ್ದಲ್ಲಿ ಹಣ ಹಿಂದಿರುಗಿಸಲಾಗುವುದು ಎಂದು ತಿಳಿಸಿ ಚೆಕ್‌ ಸಹ ನೀಡಿದ್ದರು. ನಂತರ ಟಿಕೆಟ್‌ ಕೊಡದೇ, ಹಣವನ್ನೂ ಹಿಂದಿರುಗಿಸದೇ ವಂಚಿಸಿದ್ದಾರ ಎಂದು ಆರೋಪಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ