ಬಿಸಿಲ ಧಗೆಯ ನಡುವೆ ರಾಯಚೂರಲ್ಲೂ ಮಾಂಸದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : ಮೂವರು ಪಿಂಪ್‌ಗಳು ಅಂದರ್

Published : Apr 15, 2026, 01:34 PM IST
3 arrested for prostitution

ಸಾರಾಂಶ

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಕಿಂಗ್‌ಪಿನ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನು ಕರೆತಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು.

ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನು ಕರೆಸಿ ದಂಧೆ ನಡೆಸುತ್ತಿದ್ದ ಕಿಂಗ್‌ಪಿನ್ ಅರೆಸ್ಟ್

ರಾಯಚೂರು: ಬಿಸಿಲೂರು ರಾಯಚೂರು ಜಿಲ್ಲೆಯಲ್ಲೂ ವೇಶ್ಯಾವಾಟಿಕೆ ದಂಧೆಯೊಂದು ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಈ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಜಿಲ್ಲೆಯ ಸಿಂಧನೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳು ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಹಟ್ಟಿ ರಸ್ತೆಯ ನ್ಯಾಶನಲ್ ಲೇಔಟ್‌ ನಲ್ಲಿ ಈ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಬಂಧಿತರನ್ನ ವಿಜಯ್, ಗಂಗಾಧರ, ಮೆಹಬೂಬ್ ಎಂದು ಗುರುತಿಸಲಾಗಿದೆ.

ಬಿಸಿಲ ಧಗೆಯ ನಡುವೆ ರಾಯಚೂರಲ್ಲೂ ಮಾಂಸದಂಧೆ

ಈ ಆರೋಪಿಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಹುಡುಗಿಯರನ್ನ ಇಲ್ಲಿಗೆ ಕರೆಸಿ ಗಿರಾಕಿಗಳಿಗೆ ಪೂರೈಕೆ ಮಾಡುವ ಮೂಲಕ ಹಣ ಮಾಡುತ್ತಿದ್ದರು. ಈ ಪ್ರಕರಣದ ಪ್ರಮುಖ ಕಿಂಗ್ ಪಿನ್ ವಿಜಯ್ ಎಂದು ತಿಳಿದು ಬಂದಿದ್ದು, ಪೊಲೀಸರು ಈಗ ಮೂವರನ್ನು ವಶಕ್ಕೆ ಪಡೆದು ವಿಚಾರಣ ನಡೆಸುತ್ತಿದ್ದು, ಘಟನೆ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಯಾಜ್‌ನಿಂದ 180 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಸಂತ್ರಸ್ತರಿಗೆ ಬುದ್ಧಿಮಾತು ಹೇಳಿದ ಕೈ ನಾಯಕಿ ಬೇಜವಾಬ್ದಾರಿ ಹೇಳಿಕೆಗೆ ಆಕ್ರೋಶ

ಸಾಮಾನ್ಯವಾಗಿ ಇಂತಹ ಚಟುವಟಿಕೆಗಳು ಕೆಲವು ಪ್ರವಾಸಿ ತಾಣಗಳಲ್ಲಿ ಕದ್ದುಮುಚ್ಚಿ ಸಾಮಾನ್ಯ ಎಂಬಂತೆ ನಡೆಯುತ್ತಿರುತ್ತವೆ. ಆದರೆ ಬಿಸಿಲಿನ ದಾಹ ಭಯಾನಕವಾಗಿರುವ ರಾಯಚೂರಿನಲ್ಲಿ ಬೇಸಿಗೆಯಲ್ಲಿ ಉಸಿರಾಡಿದರೆ ಸಾಕು ಎಂಬಂತಹ ಸ್ಥಿತಿ ಇದ್ದು, ಇಂತಹ ಸ್ಥಳದಲ್ಲೂ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದು ಅಚ್ಚರಿ ಮೂಡಿಸಿದೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಕಾದು ಕಾದು ಸುಸ್ತು, ದಾರಿ ಮಧ್ಯೆ ಅಯೋಧ್ಯೆಯತ್ತ ರಾಜ್ಯ ಕೈ ಶಾಸಕರ ಪ್ರಯಾಣ ರಾಮನ ದರ್ಶನ!
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಮೆರವಣಿಗೆ ಮೇಲೆ ಕಾರು ಚಾಲನೆ: 7 ವರ್ಷದ ಸಾನ್ವಿ ಸಾವು ಹಲವರಿಗೆ ಗಾಯ