ರೈತರ ದಿಲ್ಲಿ ಹೋರಾಟ ಬೆಂಬಲಿಸಿ ರಾಜ್ಯದಲ್ಲಿ 3 ಸಮಾವೇಶ

Kannadaprabha News   | Asianet News
Published : Feb 20, 2021, 12:50 PM IST
ರೈತರ ದಿಲ್ಲಿ ಹೋರಾಟ ಬೆಂಬಲಿಸಿ ರಾಜ್ಯದಲ್ಲಿ 3 ಸಮಾವೇಶ

ಸಾರಾಂಶ

ಮಾ.20ಕ್ಕೆ ಶಿವಮೊಗ್ಗ, 21ಕ್ಕೆ ಹಾವೇರಿ, 22ಕ್ಕೆ ಬೆಳಗಾವಿಯಲ್ಲಿ ರ‍್ಯಾಲಿ| ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ಸಲುವಾಗಿ ಹಸಿರು ಶಾಲನ್ನು ದೆಹಲಿಯ ಪ್ರತಿಯೊಬ್ಬ ರೈತನಿಗೂ ಅಂಚೆ ಮೂಲಕ ರವಾನೆ| 

ಬೆಂಗಳೂರು(ಫೆ.20): ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲವಾಗಿ ರಾಜ್ಯ ರೈತ ಸಂಘಟನೆಗಳು ಶಿವಮೊಗ್ಗ, ಹಾವೇರಿ ಮತ್ತು ಬೆಳಗಾವಿಯಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಿದೆ.

ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರಾದ ಕೆ.ಟಿ. ಗಂಗಾಧರ್‌, ಚುಕ್ಕಿ ನಂಜುಂಡಸ್ವಾಮಿ, ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ದಕ್ಷಿಣ ರಾಜ್ಯಗಳ ರೈತರು ಬೆಂಬಲಿಸುತ್ತಿಲ್ಲ ಎಂದು ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರೈತರ ಹೋರಾಟಕ್ಕೆ ಬೆಂಬಲವಾಗಿ ರಾಜ್ಯದಲ್ಲಿ ಮಾ.20ರಂದು ಶಿವಮೊಗ್ಗ, 21ರಂದು ಹಾವೇರಿ ಮತ್ತು 22ರಂದು ಬೆಳಗಾವಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದರು.

ರೈಲು ರೋಕೋ: ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ಶಾಂತಿಯುತ ಪ್ರತಿಭಟನೆ

ಸಮಾವೇಶಗಳಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ನ ವಕ್ತಾರ ರಾಕೇಶ್‌ ಟಿಕಾಯತ್‌ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಯುದ್ಧವೀರ್‌ ಸಿಂಗ್‌ ಭಾಗವಹಿಸಲಿದ್ದಾರೆ. ಅಲ್ಲದೆ, ತಾಲೂಕು ಮಟ್ಟದಲ್ಲಿ ರೈತರನ್ನು ಒಗ್ಗೂಡಿಸಿ ಸಮಾವೇಶ ನಡೆಸುವ ಬಗ್ಗೆ ಒಂದು ವಾರದಲ್ಲಿ ತೀರ್ಮಾನಿಸಲಾಗುವುದು ಎಂದರು. ರೈತರ ಪ್ರತಿಭಟನೆಗೆ ಟೂಲ್‌ಕಿಟ್‌ ರಚನೆ ಮಾಡಿರುವ ಆರೋಪದಲ್ಲಿ ದಿಶಾರವಿ ಬಂಧನ ಖಂಡನೀಯ ಎಂದು ತಿಳಿಸಿದರು.

ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸುವ ಸಲುವಾಗಿ ಹಸಿರು ಶಾಲನ್ನು ದೆಹಲಿಯ ಪ್ರತಿಯೊಬ್ಬ ರೈತನಿಗೂ ಅಂಚೆ ಮೂಲಕ ರವಾನಿಸಲಾಗುವುದು ಎಂದು ಅವರು ಹೇಳಿದರು. ಮಹಾದಾಯಿ ಹೋರಾಟಗಾರ ಶಂಕರಣ್ಣ ಅಂಗಡಿ ಮತ್ತಿತರರಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!