ರಾಜ್ಯ ಸರ್ಕಾರದಿಂದ 30 ಲಕ್ಷ ರೈತರಿಗೆ ಬಂಪರ್

Published : Sep 15, 2021, 08:16 AM IST
ರಾಜ್ಯ ಸರ್ಕಾರದಿಂದ 30 ಲಕ್ಷ ರೈತರಿಗೆ ಬಂಪರ್

ಸಾರಾಂಶ

ಪ್ರಸಕ್ತ ವರ್ಷ ಸಹಕಾರಿ ಬ್ಯಾಂಕುಗಳ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 20,810 ಕೋಟಿ ರು. ಸಾಲ  ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಮಾಹಿತಿ

 ವಿಧಾನಪರಿಷತ್‌ (ಸೆ.15):  ಪ್ರಸಕ್ತ ವರ್ಷ ಸಹಕಾರಿ ಬ್ಯಾಂಕುಗಳ ಮೂಲಕ ರಾಜ್ಯದ 30 ಲಕ್ಷ ರೈತರಿಗೆ 20,810 ಕೋಟಿ ರು. ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ಬಿಜೆಪಿಯ ಭಾರತಿಶೆಟ್ಟಿಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ವರ್ಷ 14,500 ಕೋಟಿ ರು. ಸಾಲ ನೀಡುವ ಗುರಿ ಹೊಂದಿದ್ದರೂ ಸಹ ಗುರಿ ಮೀರಿ ಸಾಲ ನೀಡಲಾಗಿದೆ. ಈ ವರ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದಲ್ಲಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಅನೇಕ ಕ್ರಮಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಸಹಕಾರ ಸಂಘಗಳಲ್ಲಿ 3 ಲಕ್ಷ ರು.ವರೆಗೆ ಹೈನುಗಾರಿಕೆ ಒಳಗೊಂಡಂತೆ ಅಲ್ಪಾವಧಿ ಕೃಷಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಹಾಗೂ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲವನ್ನು ಶೇ. 3ರ ಬಡ್ಡಿ ದರದಲ್ಲಿ 10 ಲಕ್ಷ ರು.ವರೆಗೆ ನೀಡಲಾಗಿದೆ. ಇದಕ್ಕಾಗಿ ಸರ್ಕಾರ ಪ್ರತಿ ವರ್ಷ ಆಯವ್ಯಯದಲ್ಲಿ 1100 ಕೋಟಿ ರು.ಅವಕಾಶ ಕಲ್ಪಿಸಲಾಗಿದೆ.

ರೈತರಿಗೆ ಬಂಪರ್ ಗಿಫ್ಟ್; 2022-23ರ ಸಾಲಿನ ಕೃಷಿ ಬೆಳೆಗೆ ಕನಿಷ್ಠ ಬೆಂಬಲ ಘೋಷಿಸಿದ ಕೇಂದ್ರ ಸರ್ಕಾರ!

ಶೂನ್ಯ ಬಡ್ಡಿ ದರದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳಿಗೆ ಹಾಗೂ ಶೇ. 4ರ ಬಡ್ಡಿ ದರದಲ್ಲಿ ಪುರುಷ ಸ್ವ ಸಹಾಯ ಸಂಘಗಳಿಗೆ 5 ಲಕ್ಷ ರು.ವರೆಗೆ ಸಾಲ ನೀಡಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು (ಪ್ಯಾಕ್ಸ್‌) ಬಹುಸೇವಾ ಸಂಸ್ಥೆಗಳಾಗಿ ಅಭಿವೃದ್ಧಿ ಪಡಿಸಿ ಮೂಲಭೂತ ಸೌಲಭ್ಯ ಒದಗಿಸಲು ಗೋದಾಮು, ಶೀತಲಕೇಂದ್ರ ನಿರ್ಮಾಣ ಮಾಡಲು ಮತ್ತು ರೈತ ಸೇವಾ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ನಬಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ರಾಜ್ಯ ಸರ್ಕಾರದ ಉತ್ತೇಜನದೊಂದಿಗೆ ಸುಮಾರು 900 ಪ್ಯಾಕ್ಸ್‌ಗಳಲ್ಲಿ ಈ ಯೋಜನೆ ಪ್ರಾರಂಭಿಸಲಾಗಿದೆ ಎಂದು ಸಚಿವ ಸೋಮಶೇಖರ್‌ ವಿವರಿಸಿದರು.

ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯನ್ನು ಸದೃಢಗೊಳಿಸಲು 402 ಲೆಕ್ಕ ಪರಿಶೋಧಕರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದ ಸಚಿವರು, ಸಹಕಾರ ಸಂಘಗಳಲ್ಲಿ ಅಕ್ರಮ, ಅವ್ಯವಹಾರ ತಡೆಯಲು ಆಡಿಟ್‌ ಇಲಾಖೆಯನ್ನು ಬಲಪಡಿಸಲಾಗುತ್ತಿದೆ. ತಪ್ಪು ಲೆಕ್ಕಪರಿಶೋಧನಾ ವರದಿ ನೀಡಿದ ಲೆಕ್ಕ ಪರಿಶೋಧಕರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌
ಡ್ರಗ್ಸ್‌ ಸಪ್ಲೈಗೆ ಸ್ತ್ರೀಯರ ಬಳಕೆ ಅಧಿಕ! ಆಫ್ರಿಕಾ ಖಂಡದ ಸ್ತ್ರೀಯರೇ ಅಧಿಕ