ಜೆಡಿಎಸ್, ಕೈನ 30 ಶಾಸಕರು ರಾಜೀನಾಮೆ ಕೊಡುವ ಮಾಹಿತಿ ಇದೆ: ಕತ್ತಿ

Published : Sep 18, 2018, 10:19 AM ISTUpdated : Sep 19, 2018, 09:28 AM IST
ಜೆಡಿಎಸ್, ಕೈನ 30 ಶಾಸಕರು ರಾಜೀನಾಮೆ  ಕೊಡುವ ಮಾಹಿತಿ ಇದೆ: ಕತ್ತಿ

ಸಾರಾಂಶ

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರದ ಬುಡ ಅಲ್ಲಾಡುತ್ತಿದೆ. ಏನು ನಡೆಯುತ್ತಿದೆ, ನಡೆಯುತ್ತಿಲ್ಲ ಎಂಬುವುದು ಅರ್ಥವಾಗುತ್ತಿಲ್ಲ. ಅಂಥದ್ರಲ್ಲಿ ಮೈತ್ರಿ ಸರಕಾರದ 30 ಶಾಸಕರು ರಾಜೀನಾಮೆ ನೀಡುತ್ತಿದ್ದಾರೆಂದು ಉಮೇಶ್ ಕತ್ತಿ ಹೇಳುತ್ತಿದ್ದಾರೆ.

ಹುಕ್ಕೇರಿ: ಸಮ್ಮಿಶ್ರ ಸರ್ಕಾರದ ಅಳಿವು- ಉಳಿವಿನ ಬಗ್ಗೆ ಗೊಂದಲಗಳು ಮುಂದುವರಿದಿರುವ ವೇಳೆಯಲ್ಲೇ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 30 ಶಾಸಕರು ರಾಜೀನಾಮೆ ನೀಡಲಿರುವ ಮಾಹಿತಿಯಿದೆ ಎಂದು ಬಿಜೆಪಿ ಮುಖಂಡ, ಶಾಸಕ ಉಮೇಶ ಕತ್ತಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಆಪರೇಷನ್‌ ಕಮಲ ನಡೆಸುವ ಅಗತ್ಯವಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಒಳ ಜಗಳವನ್ನು ಆಪರೇಷನ್‌ ಕಮಲ ಎಂದು ಬಿಂಬಿಸಲಾಗುತ್ತಿದೆ. ಈ ಆಂತರಿಕ ಕಚ್ಚಾಟದಿಂದಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ಆಪರೇಷನ್ ಕಮಲದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ಆದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 30 ಶಾಸಕರು ರಾಜೀನಾಮೆ ನೀಡಲಿರುವ ಮಾಹಿತಿ ಸಿಕ್ಕಿದೆ. ಹಾಗಾಗಿ ಸರ್ಕಾರ ಪತನವಾದರೆ ಬಿಜೆಪಿ ಹೊಸ ಸರ್ಕಾರ ರಚಿಸಲಿದೆ. ನಾವು ಮಠ ಕಟ್ಟಿಲ್ಲ. ರಾಜಕಾರಣ ಮಾಡಲು ಬಂದಿದ್ದೇವೆ ಎಂದು ಅವರು ಹೇಳಿದರು.

ತಮಗೆ ಆಪರೇಷನ್‌ ಕಮಲದ ಜವಾಬ್ದಾರಿ ನೀಡಿಲ್ಲ. ಒಂದು ವೇಳೆ ಪಕ್ಷದ ವರಿಷ್ಠರು ಈ ಕರ್ತವ್ಯ ಮಾಡಲು ತಿಳಿಸಿದರೆ ಒಪ್ಪಿಕೊಳ್ಳುವೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬರುವ ಶಾಸಕರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದರು. ಇದೇ ವೇಳೆ ಬಿಜೆಪಿ ರೆಸಾರ್ಟ್‌ ರಾಜಕಾರಣ ಮಾಡುತ್ತಿಲ್ಲ. ಸೆ.18ರಂದು ಶಾಸಕಾಂಗ ಸಭೆ ಕರೆದಿದ್ದು ತಾವು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ, ಶಾಸಕ ಸತೀಶ ಜಾರಕಿಹೊಳಿ ಬಿಜೆಪಿಗೆ ಬರುವುದಾದರೆ ತಮ್ಮ ಅಭ್ಯಂತರವೇನಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ