ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 300 ಕೋಟಿ ವೆಚ್ಚ

Published : Dec 27, 2022, 10:35 AM IST
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ 300 ಕೋಟಿ ವೆಚ್ಚ

ಸಾರಾಂಶ

ಪುನೀತ್‌ ಶಕ್ತಿಧಾಮ ಸಂಸ್ಥೆಗೆ 2.5 ಕೋಟಿ, ವಿಷ್ಣು ಸ್ಮಾರಕಕ್ಕೆ 5 ಕೋಟಿ ರು., 8001 ಕೋಟಿ ರು. ಪೂರಕ ಅಂದಾಜು ಉಭಯ ಸದನಗಳಲ್ಲಿ ಮಂಡನೆ. 

ವಿಧಾನಮಂಡಲ(ಡಿ.27): ವಿಧಾನಸಭಾ ಚುನಾವಣಾ ವೆಚ್ಚ ಭರಿಸಲು 300 ಕೋಟಿ ರು., ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ 5 ಕೋಟಿ ರು., ಹಕ್ಕು ಪತ್ರ ಒದಗಿಸಲು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಯಾದಗಿರಿ ಜಿಲ್ಲೆ ಕಾರ್ಯಕ್ರಮಕ್ಕೆ 7 ಕೋಟಿ ರು. ಸೇರಿದಂತೆ 8001.12 ಕೋಟಿ ರು. ಮೊತ್ತದ ಎರಡನೇ ಕಂತಿನ ಪೂರಕ ಅಂದಾಜುಗಳನ್ನು ಉಭಯ ಸದನಗಳಲ್ಲಿ ಸರ್ಕಾರ ಮಂಡನೆ ಮಾಡಿದೆ.

ಸೋಮವಾರ ಮುಖ್ಯಮಂತ್ರಿಗಳ ಪರವಾಗಿ ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ವಿಧಾನಪರಿಷತ್ತಿನಲ್ಲಿ ಸಭಾನಾಯಕರೂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪೂರಕ ಅಂದಾಜು ಮಂಡಿಸಿದರು.

NEWS HOUR | ಅಧಿವೇಶನದಲ್ಲಿ ಸದ್ದು ಮಾಡಿದ ಮೀಸಲಾತಿ & ಸುರತ್ಕಲ್ ಮರ್ಡರ್!

ಪುನೀತ್‌ ರಾಜ್‌ಕುಮಾರ್‌ ಅವರ ಶಕ್ತಿಧಾಮ ಸಂಸ್ಥೆಗೆ 2.5 ಕೋಟಿ ರು., ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ 4.99 ಕೋಟಿ ರು. ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಯವರು, ಸಚಿವರು ಹಾಗೂ ಇತರೆ ಗಣ್ಯರ ಪ್ರಯಾಣಕ್ಕೆ ಬಾಡಿಗೆ ಆಧಾರದ ಮೇಲೆ ಹೆಲಿಕಾಪ್ಟರ್‌ ಬಿಲ್‌ ಪಾವತಿಸಲು 6 ಕೋಟಿ ರು. ಒದಗಿಸಲಾಗಿದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗೆ 55.42 ಕೋಟಿ ರು. ಒದಗಿಸಿದ್ದು, ಇದರಲ್ಲಿ ಗಂಟು ರೋಗದಿಂದ ಮೃತಪಟ್ಟರಾಸುಗಳ ಮಾಲೀಕರಿಗೆ ಪರಿಹಾರ ನೀಡಲು 30 ಕೋಟಿ ರು. ಹಾಗೂ ಸ್ಥಳೀಯ ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿ ಹೆಚ್ಚಿಸಲು ಕೆಎಂಎಫ್‌ ಮೂಲಕ ಗೋ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲು 7 ಕೋಟಿ ರು. ಹಂಚಿಕೆ ಮಾಡಲಾಗಿದೆ.

ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪರಿಹಾರ ನೀಡಲು 758.19 ಕೋಟಿ ರು. ಅನುದಾನ, ಜಲಧಾರೆ ಯೋಜನೆ ನಿರ್ವಹಣಾ ವೆಚ್ಚ ಮತ್ತು ವಿದ್ಯುತ್‌ ವೆಚ್ಚಗಳಿಗಾಗಿ 200 ಕೋಟಿ ರು., ಬಂಧನದಲ್ಲಿದ್ದ ಕೈದಿಗಳ ಸಾವಿಗೆ ಪರಿಹಾರ ನೀಡಲು 50 ಲಕ್ಷ ರು., ಮುಖ್ಯಮಂತ್ರಿಗಳ ಕ್ಷೇತ್ರವಾದ ಶಿಗ್ಗಾಂವ್‌ ತಾಲೂಕಿನಲ್ಲಿ ಹೈಮಾಸ್ಟ್‌ ವಿದ್ಯುತ್‌ ದೀಪ ಅಳಡಿಕೆಗೆ 2 ಕೋಟಿ ರು., ಶಿಗ್ಗಾಂವ್‌ ತಾಲ್ಲೂಕು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರು. ಅನುದಾನ ಒದಗಿಸಲಾಗಿದೆ. ಇನ್ನು ಕರ್ನಾಟಕ ಕಂದಾಯ ಇಲಾಖೆಯ ಸಾಧನೆಗಳ ಹೆಸರಿನ ಕಾಫಿ ಟೇಬಲ್‌ ಪುಸ್ತಕಕ್ಕೆ ಹೆಚ್ಚುವರಿಯಾಗಿ 30 ಲಕ್ಷ ರು., ಬಿಬಿಎಂಪಿಯಲ್ಲಿನ ಸಿಬ್ಬಂದಿ ಮತ್ತು ಅಧಿಕಾರಿಗಳ ವೇತನಕ್ಕಾಗಿ 200 ಕೋಟಿ ರು., ಇತ್ತೀಚೆಗೆ ಮೃತರಾದ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರು ಪಡೆದಿದ್ದ ಚಿಕಿತ್ಸೆಗೆ 46 ಲಕ್ಷ ರು. ಹೆಚ್ಚುವರಿಯಾಗಿ ಪಾವತಿಸಲು ಹಣ ನೀಡಲು ಪೂರಕ ಅಂದಾಜುಗಳಲ್ಲಿ ಉಲ್ಲೇಖಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ
ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್