ಕರ್ನಾಟಕದಲ್ಲಿ ಶನಿವಾರ ತ್ರಿಶತಕ ಬಾರಿಸಿದ ಕೊರೋನಾ: ಇಲ್ಲಿದೆ ಜಿಲ್ಲಾವಾರು ಮಾಹಿತಿ

Published : Jun 13, 2020, 07:05 PM IST
ಕರ್ನಾಟಕದಲ್ಲಿ ಶನಿವಾರ ತ್ರಿಶತಕ ಬಾರಿಸಿದ ಕೊರೋನಾ: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಸಾರಾಂಶ

 ಕರ್ನಾಟಕದಲ್ಲಿ ಶುಕ್ರವಾರ ಡಬಲ್ ಸೆಂಚೂರಿ ಬಾರಿಸಿದ್ದ ಕೊರೋನಾ ಇಂದು (ಶನಿವಾರ) ತ್ರಿಶತಕ ಬಾರಿಸಿದೆ. ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಎಷ್ಟು ಎನ್ನುವ ಮಾಹಿತಿ ಈ ಕೆಳಗಿನಂತಿದೆ. 

ಬೆಂಗಳೂರು, (ಜೂನ್.13): ರಾಜ್ಯದಲ್ಲಿ ಇಂದು (ಶನಿವಾರ) 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 6824 ಕ್ಕೆ ಏರಿಕೆಯಾಗಿದೆ.

ಇನ್ನು 3 ಮಂದಿ ಮಹಾಮಾರಿಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ.  ಒಟ್ಟು 6,824 ಪ್ರಕರಣಗಳ ಪೈಕಿ 3,648 ಮಂದಿ ಗುಣಮುಖರಾಗಿದ್ದಾರೆ. ಇನ್ನು 3,092 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕೊರೋನಾ ಚಿಕಿತ್ಸೆಗೆ ಆಯೂರ್ವೇದ ಔಷದ ಬಳಸಲು ಸರ್ಕಾರ ಅಸ್ತು!

ಶನಿವಾರ ಕಂಡು ಬಂದ ಹೊಸ ಪ್ರಕರಣಗಳ ಪೈಕಿ 208 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದರೆ, 25 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.

ಯಾವ ಜಿಲ್ಲೆಯಲ್ಲಿಎಷ್ಟು?
ಕಲಬುರಗಿ 67, ಯಾದಗಿರಿ 52, ಬೀದರ್ 42, ಬೆಂಗಳೂರು ನಗರ 31, ದಕ್ಷಿಣಕನ್ನಡ 30, ಧಾರವಾಡ 20, ಉಡುಪಿ 14, ಹಾಸನ 11, ಬಳ್ಳಾರಿ 11, ವಿಜಯಪುರ 6, ರಾಯಚೂರು, ಉತ್ತರಕನ್ನಡ ತಲಾ 5, ಕೋಲಾರ 4, ದಾವಣಗೆರೆ 3, ಮಂಡ್ಯ, ಹಾವೇರಿ ತಲಾ 2, ಮೈಸೂರು, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Sharath R Ashok scuba diving: ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
Karnataka By-Election Results 2026 LIVE: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಆರಂಭದಲ್ಲೇ ಸ್ಟ್ರಾಂಗ್ ರೂಮ್ ಬೀಗ ನಾಪತ್ತೆ!