ಲಾಕ್‌ಡೌನ್ ಸಡಿಲವಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ಕೊರೋನಾ ಏರಿಕೆ: ಹೆಚ್ಚಿದ ಆತಂಕ

Published : Jul 06, 2021, 09:59 PM IST
ಲಾಕ್‌ಡೌನ್ ಸಡಿಲವಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ಕೊರೋನಾ ಏರಿಕೆ: ಹೆಚ್ಚಿದ ಆತಂಕ

ಸಾರಾಂಶ

* ಅನ್‌ಲಾಕ್‌ ಆಗುತ್ತಿದ್ದಂತೆಯೇ ರಾಜ್ಯದಲ್ಲಿ  ಏರಿಕೆಕಂಡ ಕೊರೋನಾ * ಕೊರೋನಾ ಪಾಸಿಟಿವ್ ಕೇಸ್ ಹಾಗೂ ಸಾವಿನ ಸಂಖ್ಯೆ ಏರಿಕೆ * ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ

ಬೆಂಗಳೂರು, (ಜುಲೈ.06): ಕರ್ನಾಟಕದಲ್ಲಿ ನಿನ್ನೆಯಿಂದ ಅಂದ್ರೆ ಜುಲೈ 05ರಿಂದ ಬಹುತೇಕ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಕೊರೋನಾ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಹೌದು..ಇಂದು ಮಂಗಳವಾರ ಒಂದೇ ದಿನ 3104 ಕೊರೋನಾ ಕೇಸ್ ಪತ್ತೆಯಾಗಿದ್ದು,  92 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.ಬೆಂಗಳೂರು ಮಹಾನಗರದಲ್ಲಿ 715 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ. 

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೋನಾ: ಪಾಸಿಟಿವಿಟಿ ದರ ಶೇಕಡ 1.02ಕ್ಕೆ ಇಳಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ 35,526 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೇವಲ 1ಕ್ಕೆ ಇಳಿದಿದ್ದ ಕೊರೋನಾ ಪಾಸಿಟಿವಿಟಿದರ ಇಂದು ಶೇ. 2.65ಕ್ಕೆ ಏರಿದೆ. ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರ ಪೈಕಿ 27,84,030 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 40,016 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಕೇಸ್
ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 715 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 5, ಬಳ್ಳಾರಿ 24, ಬೆಳಗಾವಿ 157, ಬೆಂಗಳೂರು ಗ್ರಾಮಾಂತರ 67, ಬೀದರ್ 6, ಚಾಮರಾಜನಗರ 68, ಚಿಕ್ಕಬಳ್ಳಾಪುರ 29, ಚಿಕ್ಕಮಗಳೂರು 109, ಚಿತ್ರದುರ್ಗ 64, ದಕ್ಷಿಣ ಕನ್ನಡ 216, ದಾವಣಗೆರೆ 60, ಧಾರವಾಡ 29, ಗದಗ 7, ಹಾಸನ 270, ಹಾವೇರಿ 14, ಕಲಬುರಗಿ 15, ಕೊಡಗು 140, ಕೋಲಾರ 108, ಕೊಪ್ಪಳ 15, ಮಂಡ್ಯ 113, ಮೈಸೂರು 389, ರಾಯಚೂರು 4, ರಾಮನಗರ 32, ಶಿವಮೊಗ್ಗ 119, ತುಮಕೂರು 138, ಉಡುಪಿ 114, ಉತ್ತರ ಕನ್ನಡ 72, ವಿಜಯಪುರ 2, ಯಾದಗಿರಿ 3 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ