
ಬೆಂಗಳೂರು, (ಅ.26): ಮಹಾಮಾರಿ ಕೊರೋನಾ ಸೋಂಕು ಅಬ್ಬರದಿಂದ ತತ್ತರಿಸಿ ಹೋಗಿದ್ದ ಜನತೆ ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಪ್ರತಿನಿತ್ಯ 9ರಿಂದ 10 ಸಾವಿರ ವರೆಗೆ ಪಾಸಿಟಿವ್ ಕೇಸ್ಗಳು ಪತ್ತೆಯಾಗುತ್ತಿದ್ದವು. ಆದ್ರೆ, ಕಳೆದ ಒಂದು ವಾರದಿಂದ ಸೋಂಕು ಪ್ರಕರಣಗಳು ಇಳಿಕೆಯಾಗುತ್ತಿರುವುದು ಜನರಲ್ಲಿ ಆತಂಕ ದೂರವಾಗುತ್ತಿದೆ.
ಜನರಿಗೆ ಕೊರೋನಾ ಲಸಿಕೆ ಒದಗಿಸಲು 51 ಸಾವಿರ ಕೋಟಿ ಮೀಸಲಿಟ್ಟ ಸರ್ಕಾರ
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3130 ಪ್ರಕರಣಗಳು ಧೃಡಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 805947ಕ್ಕೆ ಏರಿಕೆಯಾಗಿದೆ ಹಾಗೆಯೇ ಸೋಂಕಿಗೆ 42 ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯು ಹೆಚ್ಚಿದ್ದು ರಾಜ್ಯದಲ್ಲಿ ಇಂದು (ಸೋಮವಾರ) 8715 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 719558 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಸತತವಾಗಿ ಕೊರೊನಾ ಸೋಂಕು ಪ್ರಕರಣಗಳು ಇಳಿಕೆಯತ್ತ ಸಾಗಿದ್ದು ರಾಜಧಾನಿ ಬೆಂಗಳೂರುನಲ್ಲು ಸೋಂಕು ಗಣನೀಯವಾಗಿ ಇಳಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ