Corona Update ಕರ್ನಾಟಕದಲ್ಲಿ ಕೊರೋನಾ ಇಳಿಕೆ, ಆದ್ರೂ ಶುರುವಾಯ್ತು ಮತ್ತೊಂದು ಆತಂಕ

Published : Jan 27, 2022, 09:21 PM IST
Corona Update ಕರ್ನಾಟಕದಲ್ಲಿ ಕೊರೋನಾ ಇಳಿಕೆ, ಆದ್ರೂ ಶುರುವಾಯ್ತು ಮತ್ತೊಂದು ಆತಂಕ

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ಸೊಂಕಿನ ಸಂಖ್ಯೆಯಲ್ಲಿ ಇಳಿಕೆ * ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆ * ಮಾಹಿತಿ ನೀಡಿದ ರಾಜ್ಯ ಅರೋಗ್ಯ ಇಲಾಖೆ

ಬೆಂಗಳೂರು, (ಜ.27): ಕರ್ನಾಟಕದಲ್ಲಿ (Karnataka) ಕೊರೋನಾ ಸೊಂಕಿನ (Coronavirus) ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಆದ್ರೆ, ಸೋಂಕಿನಿಂದ ಸಾವನ್ನಪ್ಪುತ್ತಿರುವವ ಸಂಖ್ಯೆ ಹೆಚ್ಚಳವಾಗುತ್ತಿರುವು ಆತಂಕ ಮೂಡಿಸಿದೆ.

ಹೌದು...ಕಳೆದ ಒಂದು ತಿಂಗಳಿನಿಂದ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದ ಕೊರೋನಾ ವೈರಸ್ ಇದೀಗ ಇಳಿಕೆಯತ್ತ ಸಾಗಿದೆ. ಆದ್ರೆ, ಇದೀಗ ದಿಢೀರ್ ಅಂತ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಗುರುವಾರ (ಜ.27) ಒಟ್ಟು 38,754 ಮಂದಿಯಲ್ಲಿ ಕೊವಿಡ್ ಸೋಂಕು ದೃಢಪಟ್ಟಿದ್ದು, 49 ಜನರು ಸಾವನ್ನಪ್ಪಿದ್ದಾರೆ.  67,236 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

Corona Vaccine:ಖಾಸಗಿ ಮಾರುಕಟ್ಟೆಯಲ್ಲಿ ವ್ಯಾಕ್ಸಿನ್ ಮಾರಾಟಕ್ಕೆ ಅನುಮತಿ, ಈ ಷರತ್ತು ಕಡ್ಡಾಯ

ರಾಜ್ಯದಲ್ಲಿ ಈವರೆಗೆ ಒಟ್ಟು 36,92,496 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪೈಕಿ 33,25,001 ಜನರು ಚೇತರಿಸಿಕೊಂಡಿದ್ದಾರೆ.   ರಾಜ್ಯದಲ್ಲಿ ಪ್ರಸ್ತುತ 32,083 ಸಕ್ರಿಯ ಪ್ರಕರಣಗಳಿದ್ದು,  ಪಾಸಿಟಿವಿಟಿ ಪ್ರಮಾಣ ಶೇ 20.44 ಹಾಗೂ ಸೋಂಕಿನಿಂದ ಸಾಯುವವರ ಸರಾಸರಿ ಶೇ 0.12 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ 17,717 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 43,997 ಜನರು ಚೇತರಿಸಿಕೊಂಡಿದ್ದಾರೆ. 12 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 1,89,853 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ 16,66,475 ಮಂದಿಯಲ್ಲಿ ಕೊವಿಡ್ ದೃಢಪಟ್ಟಿದ್ದು, 14,60,075 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,546 ಜನರು ಸಾವನ್ನಪ್ಪಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಹೊಸದಾಗಿ 185 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಮಿಕ್ರಾನ್​​ ಸೋಂಕಿತರ ಸಂಖ್ಯೆ 1,115ಕ್ಕೆ ಏರಿಕೆಯಾಗಿದೆ ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ. 

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕು?
ಬೆಂಗಳೂರು ನಗರ 17,717, ಬಾಗಲಕೋಟೆ 345, ಬಳ್ಳಾರಿ 651, ಬೆಳಗಾವಿ 480, ಬೆಂಗಳೂರು ಗ್ರಾಮಾಂತರ 1091, ಬೀದರ್ 250, ಚಾಮರಾಜನಗರ 763, ಚಿಕ್ಕಬಳ್ಳಾಪುರ 665, ಚಿಕ್ಕಮಗಳೂರು 244, ಚಿತ್ರದುರ್ಗ 286, ದಕ್ಷಿಣ ಕನ್ನಡ 678, ದಾವಣಗೆರೆ 257, ಧಾರವಾಡ 1155, ಗದಗ 267, ಹಾಸನ 1452, ಹಾವೇರಿ 184, ಕಲಬುರ್ಗಿ 812, ಕೊಡಗು 707, ಕೋಲಾರ 572, ಕೊಪ್ಪಳ 500, ಮಂಡ್ಯ 1802, ಮೈಸೂರು 2587, ರಾಯಚೂರು 261, ರಾಮನಗರ 279, ಶಿವಮೊಗ್ಗ 626, ತುಮಕೂರು 1584, ಉಡುಪಿ 948, ಉತ್ತರ ಕನ್ನಡ 567, 223, ಯಾದಗಿರಿ 130.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ