ಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ: ಕರುನಾಡನ್ನು ಬೆಚ್ಚಿಬೀಳಿಸಿದ ಏ.28ರ ಅಂಕಿ-ಸಂಖ್ಯೆ

Published : Apr 28, 2021, 07:33 PM IST
ಕರ್ನಾಟಕದಲ್ಲಿ ಕೊರೋನಾ ಮಹಾಸ್ಫೋಟ: ಕರುನಾಡನ್ನು ಬೆಚ್ಚಿಬೀಳಿಸಿದ ಏ.28ರ ಅಂಕಿ-ಸಂಖ್ಯೆ

ಸಾರಾಂಶ

ರಾಜ್ಯದಲ್ಲಿ ಕೊರೋನಾ ಮೊದಲೇ ಅಲೆಗಿಂತ ಎರಡನೇ ಅಲೆ ಅಬ್ಬರ ಜೋರಾಗಿದ್ದು, ಊಹೆಗೂ ಮೀರಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಬೆಂಗಳೂರು, (ಏ.28): ರಾಜ್ಯದಲ್ಲಿ ಇಂದು ಒಂದೇ ದಿನ 39,047 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 229 ಮಂದಿ ಸೋಂಕಿತರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,39,822 ಕ್ಕೆಏರಿಕೆಯಾಗಿದ್ರೆ, ಇದುವರೆಗೆ 15,036 ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜನರಿಗೆ ಅನುಕೂಲ ಕಲ್ಪಿಸಲು ಕೋವಿಶೀಲ್ಡ್ ಲಸಿಕೆ ದರ ಇಳಿಸಿದ ಸೀರಂ ಸಂಸ್ಥೆ!

ಕಳೆದ 24 ಗಂಟೆಗಳಲ್ಲಿ 11,833 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ 10,95,883 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ‌.

ಇದರೊಂಇದಗೆ ಸದ್ಯ ರಾಜ್ಯದಲ್ಲಿ 3,28,884 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ  2192 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 22,596 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಅಲ್ಲದೇ 137 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 2,24,152ಕ್ಕೆ ಏರಿಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!