
ಬೆಂಗಳೂರು, (ಮೇ.11): ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖ ಕಂಡಿದ್ದು, ಇಂದು (ಮಂಗಳವಾರ) 39,510 ಪಾಸಿಟಿವ್ ಕೇಸ್ ಪತ್ತೆಯಾಗಿವೆ. 480 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,87,452 ಏರಿಕೆಯಾಗಿದ್ರೆಮ ಇದುವರೆಗೆ ಒಟ್ಟು 19,852 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
3ನೇ ಅಲೆ ತಾಗದಂತೆ ಮಕ್ಕಳನ್ನು ಕಾಪಾಡಿಕೊಳ್ಳುವುದು ಹೇಗೆ?
ಇನ್ನು ಕೊರೋನಾ ಆತಂಕದ ಮಧ್ಯೆಯೇ ಒಂದು ಸಂತಸದ ಸುದ್ದಿ ಏನಂದ್ರೆ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 22,584 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು 14,05,869 ಜನ ಗುಣಮುಖರಾದಂತಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ:
ಬಾಗಲಕೋಟೆ-676, ಬಳ್ಳಾರಿ-1558, ಬೆಳಗಾವಿ- 755, ಬೆಂಗಳೂರು ಗ್ರಾಮಾಂತರ- 688, ಬೆಂಗಳೂರು ನಗರ-15879, ಬೀದರ್-158, ಚಾಮರಾಜನಗರ-411, ಚಿಕ್ಕಬಳ್ಳಾಪುರ-609, ಚಿಕ್ಕಮಗಳೂರು-537, ಚಿತ್ರದುರ್ಗ-193, ದಕ್ಷಿಣ ಕನ್ನಡ-915, ದಾವಣಗೆರೆ-212 , ಧಾರವಾಡ-740, ಗದಗ-456 , ಹಾಸನ-654, ಹಾವೇರಿ-465 , ಕಲಬುರಗಿ-971, ಕೊಡಗು-892, ಕೋಲಾರ-913, ಕೊಪ್ಪಳ-414, ಮಂಡ್ಯ-1359, ಮೈಸೂರು-2170 , ರಾಯಚೂರು- 763, ರಾಮನಗರ-440, ಶಿವಮೊಗ್ಗ-1108, ತುಮಕೂರು-2496 , ಉಡುಪಿ-1083, ಉತ್ತರ ಕನ್ನಡ -1084, ವಿಜಯಪುರ-485, ಯಾದಗಿರಿ-426.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ