
ಬೆಂಗಳೂರು, (ಮಾ.21): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಮಾಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇಂದು (ಶನಿವಾರ) ಒಂದೇ ದಿನ ನಾಲ್ವರಿಗೆ ಕೊರೋನಾ ವೈರಸ್ ಇರುವುದು ಪತ್ತೆಯಾಗಿದೆ.
"
ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮೂರು ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ 1, ಒಟ್ಟು ಶನಿವಾರ ಒಂದೇ ದಿನದಲ್ಲಿ ನಾಲ್ಕು ಕೇಸ್ ಪತ್ತೆಯಾಗಿವೆ ಎನ್ನುವುದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊಟ್ಟಿರುವ ಮಾಹಿತಿ.
ಶ್ರೀರಾಮುಲು ಟ್ವೀಟ್ ಮೂಲಕ ಕೊಟ್ಟ ಮಾಹಿತಿ ಪ್ರಕಾರ ಸೋಂಕಿತರ ಸಂಖ್ಯೆ 18. ಇಬ್ಬರು ಸಚಿವರುಗಳಲ್ಲಿ ಸ್ಪಷ್ಟ ಮಾಹಿತಿಯೇ ಇಲ್ಲ. ಒಬ್ಬರು 18 ಅಂದ್ರೆ, ಇನ್ನೊಬ್ಬರು 19 ಅಂತಿದ್ದಾರೆ.
ಆದರೆ, ಸೋಂಕಿತ ಸಂಖ್ಯೆ ಏರಿಕೆಯಾಗುತ್ತಿರುವುದು ಮಾತ್ರ ಭಯ ಹುಟ್ಟಿಸುತ್ತಿದ್ದಂತೂ ಸತ್ಯ. ಯಾವುದಕ್ಕೂ ಜನತೆ ಎಚ್ಚರದಿಂದ ಇರುವುದು ಒಳಿತು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ