ರಾಜ್ಯದಲ್ಲಿ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ ಅಲರ್ಟ್

Suvarna News   | stockphoto
Published : Jun 02, 2021, 04:05 PM IST
ರಾಜ್ಯದಲ್ಲಿ 5 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ ಅಲರ್ಟ್

ಸಾರಾಂಶ

ರಾಜ್ಯಕ್ಕೆ ಜೂನ್ 3 ರಂದು ಮುಂಗಾರು ಪ್ರವೇಶ ಜೂ. 2 ರಿಂದ 6  ರವರೆಗೆ ವ್ಯಾಪಕ ಮಳೆ ಹವಾಮಾನ ಇಲಾಖೆಯಿಂದ ಹಲವು ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು (ಜೂ.02):  ರಾಜ್ಯಕ್ಕೆ ಜೂನ್ 3 ರಂದು ಮುಂಗಾರು ಪ್ರವೇಶವಾಗಲಿದ್ದು, ಜೂ. 2 ರಿಂದ 6  ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ  ಕರ್ನಾಟಕ ,ಕೇರಳ, ಕರಾವಳಿಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು ಭಾರಿ ಮಳೆಯಾಗಲಿದ್ದು,  ಜೂನ್ 2, 3 ಹಾಗೂ 4 ರಂದು ಯೆಲ್ಲೋ ಅಲರ್ಟ್( ಹವಾಮಾನ ಅಪಾಯಕಾರಿಯಾಗಿದ್ದು ಎಚ್ಚರಿಕೆಯಿಂದರಬೇಕೆಂದು ನೀಡುವ ಪ್ರಾಥಮಿಕ ಹಂತದ ಮುನ್ಸೂಚನೆ) ಘೋಷಣೆ ಮಾಡಲಾಗಿದೆ.

ಜೂ.3ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ: ಮುಂಗಾರು ಪೂರ್ವ ಭಾರೀ ಮಳೆ

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದ್ದು,  ಬೆಳಗಾವಿ, ಧಾರವಾಡ, ಬಿಜಾಪುರ್, ಬಾಗಲಕೋಟೆ , ಕಲ್ಬುರ್ಗಿ, ಬೀದರ್, ಯಾದಗಿರಿ , ರಾಯಚೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಜೂನ್ 3 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್