ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ನಾಲ್ವರು ಸಾವು

Published : Oct 30, 2019, 09:48 AM IST
ಸಮುದ್ರದಲ್ಲಿ ಮುಳುಗಿ ಬೆಂಗಳೂರಿನ ನಾಲ್ವರು ಸಾವು

ಸಾರಾಂಶ

ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯ ನಾಗೋರ್‌ನ ಪ್ರಸಿದ್ಧ ಮುಸ್ಲಿಂ ಪ್ರವಾಸಿ ಕೇಂದ್ರಕ್ಕೆ ಭೇಟಿ ನೀಡಿದ್ದ ಬೆಂಗಳೂರಿನ ನಾಲ್ವರು ಪ್ರವಾಸಿಗರು ಸಮುದ್ರ ಪಾಲಾಗಿದ್ದಾರೆ. ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. 

ನಾಗಪಟ್ಟಿನಂ(ಅ.30): ಪ್ರತ್ಯೇಕ ಘಟನೆಯಲ್ಲಿ ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯ ನಾಗೋರ್‌ನ ಪ್ರಸಿದ್ಧ ಮುಸ್ಲಿಂ ಪ್ರವಾಸಿ ಕೇಂದ್ರಕ್ಕೆ ಭೇಟಿ ನೀಡಿದ್ದ ಬೆಂಗಳೂರಿನ ನಾಲ್ವರು ಪ್ರವಾಸಿಗರು ಸಮುದ್ರ ಪಾಲಾಗಿದ್ದಾರೆ.

ರಿಹಾನ್‌ (12) ನಾಗೋರ್‌ ಸಮುದ್ರ ತೀರದಲ್ಲಿ ಸೋಮವಾರ ರಾತ್ರಿ ಈಜುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ. ಬಳಿಕ ಸಮುದ್ರ ಕಿನಾರೆಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ. ಇನ್ನೊಂದು ಪ್ರತ್ಯೇಕ ಘಟನೆಯಲ್ಲಿ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ.

ಯಶ್-ರಾಧಿಕಾ ನಂದಗೋಕುಲಕ್ಕೆ ಬಂದಾಯ್ತು ಹೊಸ ಅತಿಥಿ; ಅಕ್ಕ ಆಗಿದ್ದಾಳೆ 'ಐರಾ'

ಇಮ್ತಿಯಾಜ್‌ ಬಾಷಾ (50), ಅವರ ಪತ್ನಿ ರಿಯಾನ್‌ (40), ಮಗ ಅಫ್ರಾಜ್‌ (18), ಮಗಳು ಸೈನಾ (16) ಹಾಗೂ ಸಂಬಂಧಿ ನಿಜಾಮ್‌(20) ಸ್ನಾನ ಮಾಡಲೆಂದು ಸಮುದ್ರಕ್ಕೆ ಇಳಿದಿದ್ದು, ಈ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿದ್ದಾರೆ. ತಕ್ಷಣ ಸ್ಥಳೀಯರು ಸೈನಾ ಹಾಗೂ ರಿಯಾನ್‌ರನ್ನು ರಕ್ಷಿಸಿದ್ದಾರೆ. ಆದರೆ, ಇಮ್ತಿಯಾಜ್‌, ಅಫ್ರಾಜ್‌, ನಿಜಾಮ್‌ ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ