ಬೀದರ್: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಕರ್ಮಕಾಂಡ: 8-9 ತಿಂಗಳ ಸಂಬಳ ಬಾಕಿ, 40ಕ್ಕೂ ಹೆಚ್ಚು ವೈದ್ಯರು ಏಕಾಏಕಿ ವಜಾ!

Published : Oct 27, 2025, 02:19 PM IST
Bidar BRIMS hospital doctors fired

ಸಾರಾಂಶ

ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ, ಸುಮಾರು 40ಕ್ಕೂ ಹೆಚ್ಚು ಸ್ಪೆಷಲಿಸ್ಟ್ ವೈದ್ಯರನ್ನು ಯಾವುದೇ ನೋಟಿಸ್ ನೀಡದೆ ಮತ್ತು 8-9 ತಿಂಗಳ ಸಂಬಳ ಬಾಕಿ ಉಳಿಸಿಕೊಂಡು ಏಕಾಏಕಿ ವಜಾ.. ಈ ಅನ್ಯಾಯದ ವಿರುದ್ಧ ವೈದ್ಯರು ಆಡಳಿತ ಮಂಡಳಿ ಕಚೇರಿ ಬಳಿ ಧರಣಿ ನಡೆಸುತ್ತಿದ್ದು, ಅವರ ಜೀವನ ಸಂಕಷ್ಟಕ್ಕೆ ಸಿಲುಕಿದೆ.

ಬೀದರ್ (ಅ.27): ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಬ್ರಿಮ್ಸ್) ಆಸ್ಪತ್ರೆಯಲ್ಲಿ ಮತ್ತೊಂದು ದೊಡ್ಡ ಕರ್ಮಕಾಂಡ ನಡೆದಿದೆ. ಐದಾರು ವರ್ಷಗಳಿಂದ ಕರ್ತವ್ಯದಲ್ಲಿದ್ದ 40ಕ್ಕೂ ಹೆಚ್ಚು ಸ್ಪೆಷಲಿಸ್ಟ್ ವೈದ್ಯರನ್ನು ಯಾವುದೇ ನೋಟಿಸ್ ಇಲ್ಲದೇ ಏಕಾಏಕಿ ಕೆಲಸದಿಂದ ವಜಾಗೊಳಿಸಲಾಗಿದ್ದು, ಇದರಿಂದ ಅವರ ಜೀವನ ಸಂಕಷ್ಟಕ್ಕೀಡಾಗಿದೆ.

8-9 ತಿಂಗಳ ಸಂಬಳ ಬಾಕಿ ಉಳಿಸಿಕೊಂಡು ವಜಾ!

ತುರ್ತು ಚಿಕಿತ್ಸಾ ವಿಭಾಗ, ರೆಡಿಯಾಲಜಿ, ಸ್ಕ್ಯಾನಿಂಗ್, ಜನರಲ್ ಮೆಡಿಕಲ್, ಆರ್ಥೊಪೆಡಿಕ್ಸ್, ಜನರಲ್ ಸರ್ಜರಿ, ಚೆಸ್ಟ್ ಅಂಡ್ ಟಿಬಿ, ಹೆರಿಗೆ ವಿಭಾಗ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಳೆದ ಆರೇಳು ವರ್ಷಗಳಿಂದ ಕೆಲಸ ಮಾಡುತ್ತಿದ್ದ ವೈದ್ಯರು.. ಸುಮಾರು 8-9 ತಿಂಗಳದಿಂದ ಸಂಬಳ ಆಗಿಲ್ಲ. ಸಂಬಳ ಕೇಳಿದರೆ ಭ್ರಿಮ್ಸ್ ಡೈರೆಕ್ಟರ್ ಇವತ್ತು ಕೊಡ್ತೇವೆ, ನಾಳೆ ಕೊಡ್ತೇವೆ ಎನ್ನುತ್ತ ವರ್ಷವಾಗುತ್ತ ಬಂದ್ರೂ ನಯಾಪೈಸೆ ಸಂಬಳ ಕೊಟ್ಟಿಲ್ಲ.

ನೋಟಿಸ್ ನೀಡದೇ ಏಕಾಏಕಿ ವಜಾ ಮಾಡಿದ್ದೇಕೆ?

ಕಳೆದ ಆರೇಳು ತಿಂಗಳಿಂದ ಸಂಬಳವಿಲ್ಲದೆ ದುಡಿಯುತ್ತಿರುವ ವೈದ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಆರೇಳು ತಿಂಗಳ ಸಂಬಳ ಬಾಕಿ ಉಳಿಸಿಕೊಂಡು. ಯಾವುದೇ ನೋಟಿಸ್ ನೀಡದೇ ಏಕಾಏಕಿ ವಜಾಗೊಳಿಸಿದ್ದಾರೆ. ಇದರಿಂದ ನಾವು ಬೀದಿಗೆ ಬಿದ್ದಿದ್ದೇವೆ. ಇವರು ನಮ್ಮ ಜೀವನದೊಂದಿಗೆ ಚಲ್ಲಾಟ ಆಡುತ್ತಿದ್ದಾರೆ ಎಂದು ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡೆಗೆ ಪ್ರತಿಭಟನೆಯಾಗಿ ಬ್ರಿಮ್ಸ್ ಆಡಳಿತ ಮಂಡಳಿ ಕಚೇರಿ ಬಳಿ ವೈದ್ಯರು ಧರಣಿ ನಡೆಸುತ್ತಿದ್ದಾರೆ. ಸಂಬಳವೇ ನೀಡದೇ ವಜಾ ಮಾಡಿರುವುದು ಅವರಲ್ಲಿ ಭಾರಿ ಬೇಸರ ಮೂಡಿಸಿದೆ. ಈ ಘಟನೆಯಿಂದ ಆಸ್ಪತ್ರೆಯ ಚಿಕಿತ್ಸಾ ಸೇವೆಗೆ ತೊಂದರೆಯಾಗುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ
ಕೊಗೀಲು ಅಕ್ರಮ ಮನೆಗಳ ತೆರವು ಪ್ರಕರಣ; 262 ಅರ್ಜಿಗಳ ಪೈಕಿ, 37 ಮಂದಿ ಮಾತ್ರ ಮನೆ ಪಡೆಯಲು ಅರ್ಹರು!