
ದಾವಣಗೆರೆ (ನ.9): 40 ವರ್ಷಗಳಿಂದ ಸರ್ಕಾರಿ ಬಸ್ಸೇ ಕಾಣದ ಊರಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಶನಿವಾರ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿ, ತಾವೇ ಬಸ್ ಚಲಾಯಿಸಿಕೊಂಡು ಬರುವ ಮೂಲಕ ವಡೇರಹಳ್ಳಿ, ಕಳವೂರು ಗ್ರಾಮಸ್ಥರ 4 ದಶಕಗಳ ಬೇಡಿಕೆ ಈಡೇರಿಸಿದರು.
ಮಾಯಕೊಂಡ ವ್ಯಾಪ್ತಿಯ ವಡೇರಹಳ್ಳಿ ಮತ್ತು ಕಳವೂರು ಗ್ರಾಮಗಳಿಗೆ ಇತಿಹಾಸದಲ್ಲಿಯೇ ರಾಜ್ಯ ರಸ್ತೆ ಸಾರಿಗೆ ಬಸ್ ಸೌಲಭ್ಯ ಇರಲಿಲ್ಲ. ಹಲವಾರು ವರ್ಷಗಳಿಂದ ಗ್ರಾಮಸ್ಥರು ಬಸ್ಗಾಗಿ ಬೇಡಿಕೆ ಇಟ್ಟಿದ್ದರು. ಶಾಸಕ ಕೆ.ಎಸ್.ಬಸವಂತಪ್ಪ ಅವರು ಶನಿವಾರ ಈ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಿದ್ದು, ಸ್ವತಃ ಬಸ್ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಶಾಲಾ ಮಕ್ಕಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಈ ಬಸ್ ಪ್ರತಿನಿತ್ಯ ದಾವಣಗೆರೆ- ಕಳವೂರು- ವಡೇರಹಳ್ಳಿ- ಮಾಯಕೊಂಡ- ಹುಚ್ಚವ್ವನಹಳಿ- ಬಸಾಪುರ- ಗಂಜಿಗಟ್ಟೆ ಗ್ರಾಮಗಳ ಮಾರ್ಗದಲ್ಲಿ ಸಂಚರಿಸಿ ಪುನಃ ಇದೇ ಮಾರ್ಗದಲ್ಲಿ ದಾವಣಗೆರೆಗೆ ವಾಪಸ್ ಬರಲಿದೆ. ಇದರಿಂದಾಗಿ ಮಕ್ಕಳು ಶಾಲೆಗಳಿಗೆ ಹಾಗೂ ಗ್ರಾಮಸ್ಥರು ನಗರ ಪ್ರದೇಶಗಳಿಗೆ ಹೋಗಿ ಬರಲು ಅನುಕೂಲವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ