ಮಾಯಕೊಂಡದ ಗ್ರಾಮಕ್ಕೆ 40 ವರ್ಷ ಬಳಿಕ ಬಂದ ಬಸ್‌ಗೆ ಶಾಸಕರೇ ಡ್ರೈವರ್‌!

Kannadaprabha News, Ravi Janekal |   | Kannada Prabha
Published : Nov 09, 2025, 11:38 AM IST
Mayakonda MLA drives bus

ಸಾರಾಂಶ

ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು 40 ವರ್ಷಗಳಿಂದ ಬಸ್ ಸೌಲಭ್ಯವಿಲ್ಲದ ವಡೇರಹಳ್ಳಿ ಮತ್ತು ಕಳವೂರು ಗ್ರಾಮಗಳಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸ್ವತಃ ತಾವೇ ಬಸ್ ಚಲಾಯಿಸಿಕೊಂಡು ಬರುವ ಮೂಲಕ ಈ ಸೇವೆಗೆ ಚಾಲನೆ ನೀಡಿದ್ದು, ಇದು ಗ್ರಾಮಸ್ಥರು ಮತ್ತು ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಿದೆ.

ದಾವಣಗೆರೆ (ನ.9): 40 ವರ್ಷಗಳಿಂದ ಸರ್ಕಾರಿ ಬಸ್ಸೇ ಕಾಣದ ಊರಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಶನಿವಾರ ಸರ್ಕಾರಿ ಬಸ್ ಸೌಲಭ್ಯ ಕಲ್ಪಿಸಿ, ತಾವೇ ಬಸ್‌ ಚಲಾಯಿಸಿಕೊಂಡು ಬರುವ ಮೂಲಕ ವಡೇರಹಳ್ಳಿ, ಕಳವೂರು ಗ್ರಾಮಸ್ಥರ 4 ದಶಕಗಳ ಬೇಡಿಕೆ ಈಡೇರಿಸಿದರು. 

ಸ್ವತಃ ಬಸ್ ಚಲಾಯಿಸಿದ ಶಾಸಕ

ಮಾಯಕೊಂಡ ವ್ಯಾಪ್ತಿಯ ವಡೇರಹಳ್ಳಿ ಮತ್ತು ಕಳವೂರು ಗ್ರಾಮಗಳಿಗೆ ಇತಿಹಾಸದಲ್ಲಿಯೇ ರಾಜ್ಯ ರಸ್ತೆ ಸಾರಿಗೆ ಬಸ್ ಸೌಲಭ್ಯ ಇರಲಿಲ್ಲ. ಹಲವಾರು ವರ್ಷಗಳಿಂದ ಗ್ರಾಮಸ್ಥರು ಬಸ್‌ಗಾಗಿ ಬೇಡಿಕೆ ಇಟ್ಟಿದ್ದರು. ಶಾಸಕ ಕೆ.ಎಸ್.ಬಸವಂತಪ್ಪ ಅವರು ಶನಿವಾರ ಈ ಗ್ರಾಮಗಳಿಗೆ ಬಸ್ ಸೌಲಭ್ಯ ಕಲ್ಪಿಸಿದ್ದು, ಸ್ವತಃ ಬಸ್ ಚಲಾಯಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಶಾಲಾ ಮಕ್ಕಳು, ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.

ಯಾವ್ಯಾವ ಗ್ರಾಮಳಿಗೆ ಸಂಚರಿಸುತ್ತೆ?

ಈ ಬಸ್‌ ಪ್ರತಿನಿತ್ಯ ದಾವಣಗೆರೆ- ಕಳವೂರು- ವಡೇರಹಳ್ಳಿ- ಮಾಯಕೊಂಡ- ಹುಚ್ಚವ್ವನಹಳಿ- ಬಸಾಪುರ- ಗಂಜಿಗಟ್ಟೆ ಗ್ರಾಮಗಳ ಮಾರ್ಗದಲ್ಲಿ ಸಂಚರಿಸಿ ಪುನಃ ಇದೇ ಮಾರ್ಗದಲ್ಲಿ ದಾವಣಗೆರೆಗೆ ವಾಪಸ್‌ ಬರಲಿದೆ. ಇದರಿಂದಾಗಿ ಮಕ್ಕಳು ಶಾಲೆಗಳಿಗೆ ಹಾಗೂ ಗ್ರಾಮಸ್ಥರು ನಗರ ಪ್ರದೇಶಗಳಿಗೆ ಹೋಗಿ ಬರಲು ಅನುಕೂಲವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!