Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

Published : Jan 05, 2022, 07:19 PM ISTUpdated : Jan 05, 2022, 07:21 PM IST
Corona Update ಕರ್ನಾಟಕದಲ್ಲಿ ಕೊರೋನಾ ಕೇಸ್ ದ್ವಿಗುಣ, ಹೆಚ್ಚಾಯ್ತು ಆತಂಕ

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ಡಬಲ್ * ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಮಹಾಮಾರಿ * ಕೊರೋನಾ ಪಾಸಿಟಿವಿಟಿ ರೇಟ್​ ಶೇ. 3.33

ಬೆಂಗಳೂರು, (ಜ.05): ಕರ್ನಾಟಕ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಬದಲಿಗೆ ದಿನ ದಿನಕ್ಕೆ ದ್ವಿಗುಣವಾಗುತ್ತಿದೆ.

ಹೌದು...ನಿನ್ನೆಗಿಂತ (ಜ.04)ಗ ಇಂದು(ಜ.05) ಕೊರೋನಾ ಪಾಸಿಟಿವ್ ಕೇಸ್‌ಗಳ ಸಂಖ್ಯೆ ಡಬಲ್ ಆಗಿದೆ. ಕಳೆದ 24 ಗಂಟೆಗಳಲ್ಲಿ  4,246  ಪ್ರಕರಣಗಳು ಪತ್ತೆ ಆಗಿವೆ. 

ಇನ್ನು ಕೊರೋನಾ ಹಾಟ್‌ಸ್ಫಾಟ್ ಆಗುತ್ತಿರುವ ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,605 ಜನರಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್​ ಶೇ. 3.33ಕ್ಕೇರಿದೆ. ಕೊರೋನಾ ಆತಂಕದ ಮಧ್ಯೆ ರೂಪಾಂತರಿ ವೈರಸ್ ಒಮಿಕ್ರಾನ್‌ ಸಹ ಹೆಚ್ಚಳವಾಗಿದ್ದು, ಇದುವರೆಗೆ 226 ಜನರಿಗೆ ಕೇಸ್ ಪತ್ತೆಯಾಗಿದೆ  ಎಂದು ಟ್ವಿಟರ್​​ನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಮಾಹಿತಿ ನೀಡಿದ್ದಾರೆ.

Covid Crisis in Karnataka: ಫೆಬ್ರವರಿಗೆ ರಾಜ್ಯದಲ್ಲಿ ನಿತ್ಯ 1.2 ಲಕ್ಷ ಕೇಸ್‌!

ಭಾರತದ ವರದಿ
ಭಾರತದಲ್ಲಿ ಕೋವಿಡ್ 19 (Covid 19) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ 20 ಸಾವಿರಗಳಷ್ಟು ಏರಿಕೆಯಾಗುತ್ತಿದೆ. ನಿನ್ನೆ 37, 379  ಸೋಂಕಿನ ಪ್ರಕರಣಗಳು ದಾಖಲಾಗಿದ್ದವು. ಆದರೆ ಇಂದು, ಕೇವಲ 24ಗಂಟೆಯಲ್ಲಿ ಬರೋಬ್ಬರಿ 58,097 ಕೊರೋನಾ ಸೋಂಕಿನ ಕೇಸ್​ಗಳು ಪತ್ತೆಯಾಗಿವೆ. ಇದು ನಿನ್ನೆಗಿಂತಲೂ ಶೇ.55ರಷ್ಟು ಅಧಿಕವಾದ ಹಾಗಾಗಿದೆ.  ಒಟ್ಟಾರೆ ಕೊರೊನಾ ಕೇಸ್(Corona Cases)​ಗಳಲ್ಲಿ 18,466 ಕೇಸ್​ಗಳು ಮಹಾರಾಷ್ಟ್ರದಲ್ಲೇ ಪತ್ತೆಯಾಗಿವೆ. ಕಳೆದ 24ಗಂಟೆಯಲ್ಲಿ 534 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.  ಹಾಗೇ, ಒಮಿಕ್ರಾನ್​ ಸೋಂಕಿತರ ಸಂಖ್ಯೆ ದೇಶದಲ್ಲಿ 2135ಕ್ಕೆ ತಲುಪಿದೆ.  

ದೇಶದಲ್ಲಿ 24 ಗಂಟೆಯಲ್ಲಿ 15,389 ಕೊರೊನಾ ಸೋಂಕಿತರು ಗುಣಮುಖರಾಗಿ, ಡಿಸ್​ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,14,004 ಆಗಿದೆ. ಹಾಗೇ, ಭಾರತದಲ್ಲಿ ಸದ್ಯ ಕೊರೊನಾದಿಂದ ಒಟ್ಟಾರೆ ಚೇತರಿಸಿಕೊಂಡವರು 3,43,21,803 ಜನರು. ಸಾವಿನ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ. ದಿನದ ಪಾಸಿಟಿವಿಟಿ ರೇಟ್ ಶೇ.​ 4.18 ಮತ್ತು ವಾರದ ಪಾಸಿಟಿವಿಟಿ ಪ್ರಮಾಣ ಶೇ.2.60 ರಷ್ಟಿದೆ. ಹಾಗೇ ಚೇತರಿಕೆ ಪ್ರಮಾಣ ಶೇ.98.01ಕ್ಕೆ ನಿಂತಿದೆ.

ಒಮಿಕ್ರಾನ್‌ಗೆ ಮೊದಲ ಬಲಿ
ಭಾರತದಲ್ಲಿ ಒಮಿಕ್ರಾನ್‌ಗೆ ಮೊದಲ ಬಲಿಯಾಗಿದೆ. ರಾಜಸ್ಥಾನದಲ್ಲಿ ಲಕ್ಷ್ಮೀನಾರಾಯಣನಗರದ 73 ವರ್ಷದ ವ್ಯಕ್ತಿ ಒಮಿಕ್ರಾನ್​​ನಿಂದ ಮೃತಪಟ್ಟಿದ್ದಾರೆ. ಅವರು ಡಿಸೆಂಬರ್ 15 ರಂದು ಕೊವಿಡ್‌ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು ಮತ್ತು ಅಂದಿನಿಂದ ಆಸ್ಪತ್ರೆಯಲ್ಲಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ ಮುಂತಾದ ಕೊಮೊರ್ಬಿಡಿಟಿಗಳು ಅವರಿಗಿತ್ತು ಎಂದು ವರದಿಯಾಗಿದೆ.

 ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗಾಗಿ (genome sequencing) ಕಳುಹಿಸಲಾಗಿದೆ. ಏತನ್ಮಧ್ಯೆ ಡಿಸೆಂಬರ್ 21 ರಂದು ಅವರಿಗೆ ಕೋವಿಡ್ ನೆಗೆಟಿವ್ ಕಂಡುಬಂದಿದೆ. ಜೀನೋಮ್ ಸೀಕ್ವೆನ್ಸಿಂಗ್ ಫಲಿತಾಂಶಗಳು ಡಿಸೆಂಬರ್ 25 ರಂದು ಬಂದವು ಮತ್ತು ಅವರು ಒಮಿಕ್ರಾನ್ ರೂಪಾಂತರವನ್ನು ಹೊಂದಿದ್ದಾರೆಂದು ಕಂಡುಬಂದಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ