ಸೋಮವಾರ ರಾಜ್ಯದಲ್ಲಿ ಕೊರೋನಾ ಸೊಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು...!

Published : Aug 03, 2020, 08:26 PM ISTUpdated : Aug 03, 2020, 08:32 PM IST
ಸೋಮವಾರ ರಾಜ್ಯದಲ್ಲಿ ಕೊರೋನಾ ಸೊಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚು...!

ಸಾರಾಂಶ

ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳಿಗಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದವರ ಸಂಖ್ಯೆಯೇ ಹೆಚ್ಚಾಗಿದೆ.ಇದು ಸಂತಸದ ಸಂಗತಿಯಾಗಿದೆ.

ಬೆಂಗಳೂರು, (ಆ.03): ಕರ್ನಾಟಕದ ಇಂದಿನ (ಸೋಮವಾರ) ಕೊರೋನಾ ಅಂಕಿ ಸಂಖ್ಯೆ ನೋಡಿದ್ರೆ, ಹೊಸ ಆಶಾ ಭಾವನೆ ಮೂಡಿಸಿದೆ.

ಹೌದು...ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಸೋಮವಾರದ ಕೊರೋನಾ ಹೆಲ್ತ್‌ ಬುಲೆಟಿ‌ನ್ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೊಂಕಿನ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.

ಇಂದು (ಸೋಮವಾರ) ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದ್ರೆ, ಖುಷಿಯ ವಿಚಾರ ಅಂದ್ರೆ ಸೋಮವಾರವೇ 4776 ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  

ಗುಡ್‌ ನ್ಯೂಸ್: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚೇತರಿಕೆಯ ಪ್ರಮಾಣ ಹೆಚ್ಚಳ

ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಚೇತರಿಕೆಯ ಪ್ರಮಾಣ ಹೆಚ್ಚಳವಾದಂತಾಗಿದೆ. ಇನ್ನೊಂದು ನೆಮ್ಮ ವಿಚಾರ ಏನಂದ್ರೆ ಕಳೆದೊಂದು ವಾರದಿಂದ ಪ್ರತಿದಿನ ಕೊರೋನಾ ಸೊಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟುತ್ತಿತ್ತು. ಆದ್ರೆ, ಇಂದು  4752 ಕೇಸ್‌ಗಳು ಪತ್ತೆಯಾಗಿವೆ.

ಮೂಲಕ ಒಟ್ಟ ಸೋಂಕಿತರ ಸಂಖ್ಯೆ 1,39,571ಕ್ಕೇರಿದ್ದು, ಈ ಪೈಕಿ ಒಟ್ಟು 62,500 ಸೊಂಕಿತರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಸದ್ಯ 74,469 ಸಕ್ರಿಯ ಕೇಸ್‌ಗಳಿವೆ.

ಇನ್ನು ಸಫಮವಾರ 98 ಸೋಂಕಿತರು ಮೃತಪಟ್ಟಿದ್ದು, ಒಟ್ಟು 2594 ಸಾವಿನ ಪ್ರಕರಣಗಳು ದಾಖಲಾಗಿವೆ. 629 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಜಿಲ್ಲಾವಾರು ಅಂಕಿ-ಅಂಶ
 ಬೆಂಗಳೂರು ನಗರ 1497, ಮೈಸೂರು 372, ಬಳ್ಳಾರಿ 305, ಬಾಗಲಕೋಟೆ 209, ಧಾರವಾಡ 191, ಕಲಬುರಗಿ 170, ಕೊಪ್ಪಳ 157, ಶಿವಮೊಗ್ಗ 155, ದಕ್ಷಿಣ ಕನ್ನಡ 153, ಮಂಡ್ಯ 152, ಹಾಸನ 131, ಉಡುಪಿ 126, ತುಮಕೂರು 122, ರಾಯಚೂರು 115, ಗದಗ 100, ಹಾವೇರಿ 99, ವಿಜಯಪುರ 92, ಯಾದಗಿರಿ 86, ರಾಮನಗರ 68, ಬೆಳಗಾವಿ 60, ಚಿಕ್ಕಬಳ್ಳಾಪುರ 58, ಚಾಮರಾಜನಗರ 52, ಬೀದರ್ 50, ಚಿಕ್ಕಮಗಳೂರು 46, ದಾವಣಗೆರೆ 41, ಕೋಲಾರ 40, ಕೊಡಗು 39, ಚಿತ್ರದುರ್ಗ 33, ಉತ್ತರ ಕನ್ನಡ 31 ಮತ್ತು ಬೆಂಗಳೂರು ಗ್ರಾಮಾಂತರ 02.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!