ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್

Published : Apr 30, 2021, 08:08 PM ISTUpdated : Apr 30, 2021, 08:14 PM IST
ಕರುನಾಡಿಗೆ ಬಿಗ್ ಶಾಕ್:  ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್

ಸಾರಾಂಶ

ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ಎರಡನೇ ಅಲೆ  ನಿಯಂತ್ರಣಕ್ಕೆ ಬಾರದಷ್ಟು ಹೆಚ್ಚುತ್ತಿದೆ. ಅದರಲ್ಲೂ ಏ.30ರ ಅಂಕಿ-ಸಂಖ್ಯೆ ಈ ಹಿಂದಿನ ಎಲ್ಲಾ ದಾಖಲೆಗಳನ್ನ ಉಡೀಸ್ ಮಾಡಿದೆ.

ಬೆಂಗಳೂರು, (ಏ.30): ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಇಂದು (ಶನಿವಾರ) ಒಂದೇ ದಿನ ಬರೋಬ್ಬರಿ 48,296 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 217 ಜನ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,23,142 ಕ್ಕೆ ಏರಿಕೆಯಾಗಿದ್ರೆ,  ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,523ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೋನಾ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಡ್ರೋಣ್ ಮೂಲಕ ಸ್ಯಾನಿಟೈಸರ್ ಸಿಂಪಡಣೆ

ಇನ್ನು ಕಳೆದ 24 ಗಂಟೆಗಳಲ್ಲಿ 14,884 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ 11,24,909 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,82,690.

ಬೆಂಗಳೂರಿನಲ್ಲಿ ಶೇ.50rರಷ್ಟು ಕೇಸ್
ಹೌದು.. ಇಂದು (ಏ.30) ರಾಜ್ಯದಲ್ಲಿ ಪತ್ತೆಯಾಗಿರುವ  48,296 ಪಾಸಿಟಿವ್ ಕೇಸ್‌ಗಳಲ್ಲಿ ಶೇ. 50ರಷ್ಟು ಬೆಂಗಳೂರಿನವದ್ದಾಗಿವೆ.

ಹೌದು.. ರಾಜಧಾನಿ ಬೆಂಗಳೂರಿನಲ್ಲೇ ಶನಿವಾರ 26,756 ಜನರಿಗೆ ಸೋಂಕು ತಗುಲಿದೆ. 93 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,59,058 ಕ್ಕೆ ಏರಿಕೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ