ವರಮಹಾಲಕ್ಷ್ಮಿ ದಿನದಂದು ರಾಜ್ಯದಲ್ಲಿ ಕೊರೋನಾ ಅಬ್ಬರ: ಇಲ್ಲಿದೆ ಜಿಲ್ಲಾವಾರು ವಿವರ

Published : Jul 31, 2020, 07:59 PM ISTUpdated : Jul 31, 2020, 08:03 PM IST
ವರಮಹಾಲಕ್ಷ್ಮಿ ದಿನದಂದು ರಾಜ್ಯದಲ್ಲಿ ಕೊರೋನಾ ಅಬ್ಬರ: ಇಲ್ಲಿದೆ ಜಿಲ್ಲಾವಾರು ವಿವರ

ಸಾರಾಂಶ

ವರಮಹಾಲಕ್ಷ್ಮಿ ದಿನದಂದು ಇಂದು (ಶುಕ್ರವಾರ) ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಹಾಗಾದ್ರೆ, ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್.? ಈ ಕೆಳಗಿನಂತಿದೆ ವಿವರ

ಬೆಂಗಳೂರು, (ಜುಲೈ.31): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಇಂದು (ಶುಕ್ರವಾರ) 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. 5483 ಹೊಸ ಕೇಸ್‌ ಪತ್ತೆಯಾಗಿದ್ರೆ,  84 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ನಾಳೆ ಪ್ರಧಾನಿ ಮೋದಿ ಭಾಷಣ, ಸೆಕ್ಸ್ ವರ್ಕರ್ ಮಕ್ಕಳಿಗೆ ಉಚಿತ ಶಿಕ್ಷಣ; ಜು.31ರ ಟಾಪ್ 10 ಸುದ್ದಿ!

ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 3130 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 2230 ಮಂದಿ ಸಾವನ್ನಪ್ಪಿದ್ದು, 71,968 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರ ಸೋಂಕಿನ ವಿವರ
ಬೆಂಗಳೂರು ನಗರ 2220, ಬಳ್ಳಾರಿ 340, ಬೆಳಗಾವಿ 217, ಉಡುಪಿ 213, ದಕ್ಷಿಣಕನ್ನಡ, ಮೈಸೂರು ತಲಾ 204, ಧಾರವಾಡ 180, ಶಿವಮೊಗ್ಗ 158, ಕಲಬುರ್ಗಿ 144, ದಾವಣಗೆರೆ 122, ರಾಯಚೂರು 119, ವಿಜಯಪುರ 118, ಬೆಂಗಳೂರು ಗ್ರಾಮಾಂತರ 105, ಬೀದರ್ 104, ಹಾಸನ 100, ತುಮಕೂರು 95,  ಉತ್ತರಕನ್ನಡ, ಗದಗ ತಲಾ 92, ರಾಮನಗರ 89, ಬಾಗಲಕೋಟೆ 88, ಚಿಕ್ಕಮಗಳೂರು 74, ಮಂಡ್ಯ 65, ಹಾವೇರಿ 57, ಯಾದಗಿರಿ 56, ಚಿಕ್ಕಬಳ್ಳಾಪುರ 48, ಚಾಮರಾಜನಗರ 44, ಕೊಪ್ಪಳ 38, ಚಿತ್ರದುರ್ಗ 35, ಕೋಲಾರ 32, ಕೊಡಗು 30 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!