ಪ್ರವಾಹದಿಂದ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರು.

Kannadaprabha News   | Asianet News
Published : Oct 22, 2020, 08:00 AM IST
ಪ್ರವಾಹದಿಂದ ಮನೆಗೆ ಹಾನಿಯಾಗಿದ್ದರೆ 5 ಲಕ್ಷ ರು.

ಸಾರಾಂಶ

ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಶೇ.75ಕ್ಕಿಂತ ಹೆಚ್ಚು ಮನೆ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರದ ಮೊತ್ತವನ್ನು ಸರ್ಕಾರ ಪ್ರಕಟಿಸಿದೆ.

ಬೆಂಗಳೂರು (ಅ.22):  ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಶೇ.75ಕ್ಕಿಂತ ಹೆಚ್ಚು ಮನೆ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರದ ಮೊತ್ತವನ್ನು ಸರ್ಕಾರ ಪ್ರಕಟಿಸಿದೆ.

ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿಯಾಗಿದ್ದರೆ ಮಾರ್ಗಸೂಚಿ ದರವು 95,100 ರು. ಇದೆ. ಸರ್ಕಾರವು ಇದರ ಮೊತ್ತವನ್ನು ಪರಿಷ್ಕೃತ ಮಾಡಿ 5 ಲಕ್ಷ ರು. ಘೋಷಿಸಿದೆ. ಶೇ.25-75ರಷ್ಟುಭಾಗಶಃ ಮನೆಹಾನಿ (ಕೆಡವಿ ಹೊಸದಾಗಿ ನಿರ್ಮಿಸಲು) ಸಹ ಮಾರ್ಗಸೂಚಿ ದರ 95,100 ರು. ಇದ್ದು, ಪರಿಷ್ಕೃತ ದರ 5 ಲಕ್ಷ ರು. ನಿಗದಿ ಮಾಡಲಾಗಿದೆ. ಶೇ.25-75ರಷ್ಟುಭಾಗಶಃ ಮನೆಹಾನಿಗೆ (ದುರಸ್ತಿ) 3 ಲಕ್ಷ ರು. ಮತ್ತು ಶೇ.15-25ರಷ್ಟುಅಲ್ಪಸ್ವಲ್ಪ ಮನೆಹಾನಿಯಾಗಿದ್ದರೆ 50 ಸಾವಿರ ರು. ಪರಿಹಾರ ಪ್ರಕಟಿಸಲಾಗಿದೆ.

ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರ ಬಟ್ಟೆ-ಬರೆ ಹಾಗೂ ದಿನಬಳಕೆ ವಸ್ತುಗಳಿಗಾಗಿ ಕೇಂದ್ರ ಸರ್ಕಾರವು ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ 3800 ರು. ನಿಗದಿ ಪಡಿಸಿರುವುದರ ಜತೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ 6200 ರು. ಸೇರಿಸಿ ಒಟ್ಟು 10 ಸಾವಿರ ರು. ಪರಿಹಾರವನ್ನು ಪ್ರತಿ ಕುಟುಂಬಕ್ಕೆ ನೀಡಲಾಗುವುದು. ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್‌ ನಿರ್ಮಾಣ/ ದುರಸ್ತಿಗಾಗಿ ಕೇಂದ್ರ ಸರ್ಕಾರ್‍ದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಸರ್ಕಾರ ನೀಡುತ್ತಿದೆ.

 ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಶೇ.75ಕ್ಕಿಂತ ಹೆಚ್ಚು ಮನೆ ಹಾನಿಯಾಗಿದ್ದರೆ 5 ಲಕ್ಷ ರು. ಪರಿಹಾರದ ಮೊತ್ತವನ್ನು ಸರ್ಕಾರ ಪ್ರಕಟಿಸಿದೆ.

‘ಮಹಾಮಳೆ’ಗೆ ತೊಯ್ದು ತೊಪ್ಪೆಯಾದ ಬೆಂಗ್ಳೂರು: 23 ವರ್ಷದ 3ನೇ ಮಹಾಮಳೆ

ಶೇ.75ಕ್ಕಿಂತ ಹೆಚ್ಚು ಸಂಪೂರ್ಣ ಮನೆ ಹಾನಿಯಾಗಿದ್ದರೆ ಮಾರ್ಗಸೂಚಿ ದರವು 95,100 ರು. ಇದೆ. ಸರ್ಕಾರವು ಇದರ ಮೊತ್ತವನ್ನು ಪರಿಷ್ಕೃತ ಮಾಡಿ 5 ಲಕ್ಷ ರು. ಘೋಷಿಸಿದೆ. ಶೇ.25-75ರಷ್ಟುಭಾಗಶಃ ಮನೆಹಾನಿ (ಕೆಡವಿ ಹೊಸದಾಗಿ ನಿರ್ಮಿಸಲು) ಸಹ ಮಾರ್ಗಸೂಚಿ ದರ 95,100 ರು. ಇದ್ದು, ಪರಿಷ್ಕೃತ ದರ 5 ಲಕ್ಷ ರು. ನಿಗದಿ ಮಾಡಲಾಗಿದೆ. ಶೇ.25-75ರಷ್ಟುಭಾಗಶಃ ಮನೆಹಾನಿಗೆ (ದುರಸ್ತಿ) 3 ಲಕ್ಷ ರು. ಮತ್ತು ಶೇ.15-25ರಷ್ಟುಅಲ್ಪಸ್ವಲ್ಪ ಮನೆಹಾನಿಯಾಗಿದ್ದರೆ 50 ಸಾವಿರ ರು. ಪರಿಹಾರ ಪ್ರಕಟಿಸಲಾಗಿದೆ.

ಪ್ರವಾಹ ಪೀಡಿತ ಗ್ರಾಮಗಳ ಸಂತ್ರಸ್ತರ ಬಟ್ಟೆ-ಬರೆ ಹಾಗೂ ದಿನಬಳಕೆ ವಸ್ತುಗಳಿಗಾಗಿ ಕೇಂದ್ರ ಸರ್ಕಾರವು ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಲ್ಲಿ ಪ್ರತಿ ಕುಟುಂಬಕ್ಕೆ 3800 ರು. ನಿಗದಿ ಪಡಿಸಿರುವುದರ ಜತೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ 6200 ರು. ಸೇರಿಸಿ ಒಟ್ಟು 10 ಸಾವಿರ ರು. ಪರಿಹಾರವನ್ನು ಪ್ರತಿ ಕುಟುಂಬಕ್ಕೆ ನೀಡಲಾಗುವುದು. ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಪುನರ್‌ ನಿರ್ಮಾಣ/ ದುರಸ್ತಿಗಾಗಿ ಕೇಂದ್ರ ಸರ್ಕಾರ್‍ದ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿಯಾಗಿ ಸರ್ಕಾರ ನೀಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಂಗಾಭದ್ರ ಜಲಾಶಯದ ನೀರಿನ ಮಟ್ಟದಲ್ಲಿ ಭಾರಿ ಇಳಿಕೆ: ಹಲವು ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ
ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?