152 ತಾಲೂಕುಗಳಿಗೆ 50 ಕೋಟಿ ರೂಪಾಯಿ ಬಿಡುಗಡೆ!

Published : Jan 27, 2019, 03:33 PM ISTUpdated : Jan 27, 2019, 03:35 PM IST
152 ತಾಲೂಕುಗಳಿಗೆ 50 ಕೋಟಿ ರೂಪಾಯಿ ಬಿಡುಗಡೆ!

ಸಾರಾಂಶ

ಬರಪೀಡಿತ ತಾಲೂಕುಗಳಿಗೆ 50 ಕೋಟಿ ರು. ಬಿಡುಗಡೆ| ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರು

ಬೆಂಗಳೂರು[ಜ.27]: ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ತೀವ್ರ ಅಭಾವವನ್ನು ನೀಗಿಸಲು ಬರಪೀಡಿತ ತಾಲೂಕು ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ 50 ಕೋಟಿ ರು. ಅನುದಾನ ಮಂಜೂರು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.

ಬರಪೀಡಿತ ತಾಲೂಕುಗಳ ಪೈಕಿ ಗುರುವಾರ 152 ತಾಲೂಕುಗಳ ಪ್ರತಿ ಸ್ಥಳೀಯ ಸಂಸ್ಥೆಗೆ 15 ಲಕ್ಷ ರು.ಗಳಿಂದ 25 ಲಕ್ಷ ರು.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಿಂದ ಬೋರ್‌ವೆಲ್‌ ರಿಪೇರಿ, ಟ್ಯಾಂಕರ್‌ ಮೂಲಕ ನೀರು ಪೂರೈಕೆಯಂತಹ ಕ್ರಮಗಳ ಮೂಲಕ ನೀರಿನ ಅಭಾವ ನೀಗಿಸಬೇಕು.

ಅನುದಾನ ಬಳಕೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಫೋರ್ಸ್‌ ರಚಿಸಿಕೊಂಡು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವ ಕಾಮಗಾರಿಗಳ ಕ್ರಿಯಾಯೋಜನೆ ರಚಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದ ತುರ್ತಾಗಿ ಅನುಷ್ಠಾನಗೊಳಿಸಬೇಕು. ಕಾಮಗಾರಿಗಳನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಮೂಲಕ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ