
ಬೆಂಗಳೂರು, (ಜೂನ್.06) : ಟೂರಿಸ್ಟ್ ವಾಹನಗಳ ಮೇಲಿನ ಜೂನ್ ತಿಂಗಳ ಶೇ.50ರಷ್ಟು ತೆರಿಗೆ ಕಡಿತ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು (ಶನಿವಾರ) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಹೋಟೆಲ್, ಸಾರಿಗೆ ಇಲಾಖೆಯ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಆಟೋ, ಕ್ಯಾಬ್ ಚಾಲಕರು 5000 ರೂ. ಪಡೆಯುವುದು ಹೇಗೆ? ಯಾವೆಲ್ಲಾ ಡ್ರೈವರ್ಸ್ಗೆ ಅನ್ವಯ?
ಪ್ರವಾಸೋದ್ಯಮ ಸಚಿವ ಸಿಟಿ ರವಿ ಪ್ರತಿಕ್ರಿಯೆ
ಲಾಕ್ ಡೌನ್ ನಿಂದಾಗಿ ಪ್ರವಾಸಿ ವಾಹನ ಮಾಲೀಕರು ವಾಹನಗಳ ಓಡಾಟವಿಲ್ಲದೇ ತೆರಿಗೆ ಪಾವತಿಗೂ ಕಷ್ಟವಾಗಿತ್ತು. ಇದೀಗ ಇಂತಹ ಮಾಲೀಕರ ಸಂಕಷ್ಟಕ್ಕೆ ಪ್ರತಿ ಸ್ಪಂದಿಸಿರುವ ರಾಜ್ಯ ಸರ್ಕಾರ ಶೇ.50ರಷ್ಟು ಟೂರಿಸ್ಟ್ ವಾಹನಗಳ ಮೇಲಿನ ಜೂನ್ ತಿಂಗಳ ತೆರಿಗೆ ಕಡಿತ ಮಾಡಲು ಮುಂದಾಗಿದೆ. ಈ ಮೂಲಕ ರಾಜ್ಯದ ಪ್ರವಾಸಿ ವಾಹನಗಳ ಮಾಲೀಕರಿಗೆ ಕೊಂಚ ರಿಲೀಫ್ ನೀಡಿದಂತಾಗಿದೆ
ಕೊರೋನಾದಿಂದ ಭಾರೀ ಹೊಡೆತ ಬಿದ್ದ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರ ನೆಲ ಕಚ್ಚಿದೆ. ಇದನ್ನು ಹೇಗಾದ್ರೂ ಮಾಡಿ ಮೇಲೆತ್ತಲು ರಾಜ್ಯ ಸರ್ಕಾರ ಹಂತ-ಹಂತವಾಗಿ ಟೂರಿಸ್ಟ್ ಸ್ಥಳಗಳನ್ನ ತೆರೆಯಲು ಅನುಮತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ