ರಾಜ್ಯದಲ್ಲಿರುವ ಎಲ್ಲ 50,000 ಕೈದಿಗಳಿಗೂ ಶೀಘ್ರದಲ್ಲೇ ಲಸಿಕೆ

Kannadaprabha News   | Asianet News
Published : May 31, 2021, 09:11 AM IST
ರಾಜ್ಯದಲ್ಲಿರುವ ಎಲ್ಲ 50,000 ಕೈದಿಗಳಿಗೂ ಶೀಘ್ರದಲ್ಲೇ ಲಸಿಕೆ

ಸಾರಾಂಶ

* ಕೈದಿಗಳಿಗೆ ಲಸಿಕೆ ಅಭಿಯಾನ ಆರಂಭಿಸಿದ ಬಂದೀಖಾನೆ ಇಲಾಖೆ  * ಮೊದಲ ಡೋಸ್‌ ಲಸಿಕೆ ಪಡೆದ 45 ವರ್ಷ ಮೇಲ್ಪಟ್ಟ ಸುಮಾರು 2500 ಕೈದಿಗಳು  * 18 ವರ್ಷ ಮೇಲ್ಪಟ್ಟ ಸಜಾ ಬಂಧಿಗಳಿಗೆ ಲಸಿಕೆ   

ಬೆಂಗಳೂರು(ಮೇ.31): ಸೆರೆಮನೆಯಲ್ಲಿ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಕೈದಿಗಳಿಗೆ ಲಸಿಕೆ ಅಭಿಯಾನವನ್ನು ರಾಜ್ಯ ಬಂದೀಖಾನೆ ಇಲಾಖೆ ಕೈಗೊಂಡಿದ್ದು, ಸುಮಾರು 50 ಸಾವಿಕ್ಕೂ ಹೆಚ್ಚು ಕೈದಿಗಳು ಲಸಿಕೆ ಪಡೆಯಲಿದ್ದಾರೆ.

ಈ ಸಂಬಂಧ ಭಾನುವಾರ ‘ಕನ್ನಡಪ್ರಭ’ ಜತೆ ಮಾತನಾಡಿದ ಬಂದೀಖಾನೆ ಇಲಾಖೆಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರು, ಜೈಲುಗಳಲ್ಲಿ ಸಜಾ ಮತ್ತು ವಿಚಾರಣಾಧೀನ ಕೈದಿಗಳಿಗೆ ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ಲಸಿಕೆ ನೀಡಲು ಸರ್ಕಾರಿ ಕ್ಲಿನಿಕ್‌ಗಳು, ಖಾಸಗಿ ವೆಚ್ಚವೂ ಸರ್ಕಾರದ್ದೇ!

ಕೇಂದ್ರ ಕಾರಾಗೃಹ ಸೇರಿದಂತೆ ಎಲ್ಲ ಕಾರಾಗೃಹಗಳಲ್ಲಿ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ. ಜೈಲುಗಳಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ಬಂಧಿಗಳಿದ್ದಾರೆ. ಮೊದಲ ಹಂತದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ 45 ವರ್ಷ ಮೇಲ್ಪಟ್ಟ ಸುಮಾರು 2500 ಕೈದಿಗಳು ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ. ಈಗ 18 ವರ್ಷ ಮೇಲ್ಪಟ್ಟ ಸಜಾ ಬಂಧಿಗಳಿಗೆ ಲಸಿಕೆ ಹಾಕಿಸಲಾಗುತ್ತಿದೆ. ಈ ಅಭಿಯಾನವನ್ನು ಸ್ಥಳೀಯ ಜಿಲ್ಲಾಡಳಿತ ಹಾಗೂ ಬಿಬಿಎಂಪಿ ಸಹಕಾರದಲ್ಲಿ ನಡೆಸಲಾಗುತ್ತಿದೆ ಎಂದು ಅಲೋಕ್‌ ಮೋಹನ್‌ ಮಾಹಿತಿ ನೀಡಿದರು.

ಲಸಿಕೆ ಲಭ್ಯತೆ ಮೇರೆಗೆ ಪ್ರತಿ ದಿನ ಇಂತಿಷ್ಟು ಕೈದಿಗಳಿಗೆ ಲಸಿಕೆ ಹಾಕಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಎಲ್ಲ 50 ಸಾವಿರ ಕೈದಿಗಳಿಗೆ ಲಸಿಕೆ ಸಿಗಲಿದೆ ಎಂದು ಡಿಜಿಪಿ ತಿಳಿಸಿದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ