Violation traffic rules: ಶೇ.50 ಟ್ರಾಫಿಕ್‌ ದಂಡ: 15 ದಿನ ವಿಸ್ತರಣೆ

Published : Feb 15, 2023, 12:35 AM IST
Violation traffic rules: ಶೇ.50 ಟ್ರಾಫಿಕ್‌ ದಂಡ: 15 ದಿನ ವಿಸ್ತರಣೆ

ಸಾರಾಂಶ

ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.

ಬೆಂಗಳೂರು (ಫೆ.15) : ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ನೀಡುವುದನ್ನು 15 ದಿನಗಳ ಕಾಲ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ಧರಿಸಿದೆ.

ಸೋಮವಾರ ಹೈಕೋರ್ಟ್‌(Karnataka Highcourt) ಕಾನೂನು ಸೇವೆಗಳ ಪ್ರಾಧಿಕಾರ(Legal Services Authority)ದ ಕಚೇರಿಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್ ನ್ಯಾಯಯೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಾರಿಗೆ ಮತ್ತು ಪೊಲೀಸ್‌ ಇಲಾಖೆಯ ಉನ್ನತ ಶ್ರೇಣಿಯ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

 

ಟ್ರಾಫಿಕ್ ದಂಡಕ್ಕೆ ಶೇ.50 ವಿನಾಯಿತಿ ವಿಸ್ತರಣೆ ಆಗುತ್ತಾ?

ನಗರದ ವಿಶೇಷ ಪೊಲೀಸ್‌ ಆಯುಕ್ತ (ಸಂಚಾರ) ಡಾ.ಎಂ.ಎ ಸಲೀಂ(Dr. MA Saleem) ಅವರು, ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಟ್ರಾಫಿಕ್‌ ದಂಡ(Traffic fine) ಪಾವತಿ ಮೊತ್ತದಲ್ಲಿ ಶೇ.50ರಷ್ಟುರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಮನವಿ ಹಿನ್ನೆಲೆಯಲ್ಲಿ ಶೇ.50ರಷ್ಟುರಿಯಾಯಿತಿ ನೀಡುವುದನ್ನು 15 ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕಾನೂನು ಸೇವೆಗಳ ಪ್ರಾಧಿಕಾರ ತೀರ್ಮಾನಿಸಿತು.

2 ಕೋಟಿ ಪ್ರಕರಣ-1300 ಕೋಟಿ ದಂಡ ಬಾಕಿ

ಸಾರಿಗೆ ಇಲಾಖೆಯು ಫೆ.3ರಿಂದ ಫೆ.11ರವರೆಗೆ ಶೇ.50 ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿತ್ತು. ಇದರಿಂದಾಗಿ ಒಟ್ಟು 52.11 ಲಕ್ಷ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, 152 ಕೋಟಿ ರು. ದಂಡ ಸಂಗ್ರಹಿಸಲಾಗಿತ್ತು.

ರಾಜ್ಯದಲ್ಲಿ ಇನ್ನೂ 2 ಕೋಟಿ ಟ್ರಾಫಿಕ್‌ ದಂಡ ಪ್ರಕರಣಗಳಿದ್ದು, 1,300 ಕೋಟಿ ರು. ದಂಡದ ಮೊತ್ತ ಸಂಗ್ರಹಗೊಳ್ಳಬೇಕಿದೆ. ಇದರಿಂದ ಶೇ.50ರಷ್ಟುವಿನಾಯ್ತಿ ನೀಡುವುದನ್ನು ಎರಡು ವಾರ ಕಾಲ ವಿಸ್ತರಿಸಲು ಕೋರಿ ವಿಶೇಷ ಆಯುಕ್ತರಾದ (ಸಂಚಾರ ವಿಭಾಗ) ಡಾ.ಸಲೀಂ ಅವರು ಕಾನೂನು ಸೇವಾ ಪ್ರಾಧಿಕಾರಕ್ಕೆ ಪತ್ರ ಬರೆದು ಕೋರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷೆಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.

57 ಪ್ರಕರಣಗಳಿಗೆ ದಂಡ ಪಾವತಿಸಿದ ಹುಬ್ಳಿ ಹೈದ : ಕೊನೆ ದಿನ 31 ಕೋಟಿ ಸಂಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ