ರಾಜ್ಯದ 52 ಅಣೆಕಟ್ಟೆ ಪುನಶ್ಚೇತನಕ್ಕೆ ಕೇಂದ್ರದ 750 ಕೋಟಿ: ಸಚಿವ ಜಾರಕಿಹೊಳಿ

Kannadaprabha News   | Asianet News
Published : Nov 28, 2020, 09:46 AM IST
ರಾಜ್ಯದ 52 ಅಣೆಕಟ್ಟೆ ಪುನಶ್ಚೇತನಕ್ಕೆ ಕೇಂದ್ರದ 750 ಕೋಟಿ: ಸಚಿವ ಜಾರಕಿಹೊಳಿ

ಸಾರಾಂಶ

ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಕೋರಿಕೆಗೆ ಕೇಂದ್ರದ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌| ನಮ್ಮ ಮನವಿಗೆ ಕೇಂದ್ರ ಸಚಿವರ ಸ್ಪಂದನೆ| ವಿಶ್ವಬ್ಯಾಂಕ್‌ ನಿಂದ ನೆರವು ಪಡೆಯುಲು ಸಮ್ಮತಿ ಸೂಚಿಸಿದ ಕೇಂದ್ರ ಸಚಿವರು: ಜಾರಕಿಹೊಳಿ| 

ಬೆಂಗಳೂರು(ನ.28): ರಾಜ್ಯದ ಅಣೆಕಟ್ಟುಗಳ ಪುನಶ್ಚೇತನ ಮತ್ತು ಸಬಲೀಕರಣಕ್ಕೆ 750 ಕೋಟಿ ರು. ಅನುದಾನ ನೀಡಲು ಕೇಂದ್ರ ಜಲ ಶಕ್ತಿ ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ರಾಜ್ಯ ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರದ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾದ ಜಾರಕಿಹೊಳಿ ಅವರು, ರಾಜ್ಯದ ಗಾಯತ್ರಿ ಅಣೆಕಟ್ಟು, ತುಂಗಭದ್ರಾ ಜಲಾಶಯ, ನಾರಾಯಣಪುರ ಜಲಾಶಯ ಮತ್ತು ಕೆಆರ್‌ಎಸ್‌ ಜಲಾಶಯ ಸೇರಿದಂತೆ ಒಟ್ಟು 52 ಅಣೆಕಟ್ಟುಗಳ ಸಬಲೀಕರಣಕ್ಕೆ 1,500 ಕೋಟಿ ರು. ಗಳನ್ನು ವಿಶ್ವಬ್ಯಾಂಕ್‌ನ ಅಣೆಕಟ್ಟು ಪುನಶ್ಚೇತನ ಮತ್ತು ಸಬಲೀಕರಣ ಯೋಜನೆಯಡಿ ಒದಗಿಸಿ ಕೊಡಬೇಕು ಎಂದು ಮನವಿ ಮಾಡಿದ್ದರು. 

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ನಮ್ಮ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದು ವಿಶ್ವಬ್ಯಾಂಕ್‌ ನಿಂದ ನೆರವು ಪಡೆಯುಲು ಸಮ್ಮತಿ ಸೂಚಿಸಿದ್ದಾರೆ. ಕಾರ್ಯಯೋಜನೆಯನ್ನು ಅಂತಿಮಗೊಳಿಸಿ ಅನುಮೋದನೆ ಪಡೆಯುತ್ತೇವೆ. ರಾಜ್ಯದ ನೀರಾವರಿ ಯೋಜನೆಯನ್ನು ಕಾಲಮಿತಿಯಲ್ಲಿ ಮಕ್ತಾಯಗೊಳಿಸುತ್ತೇವೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!