ಬ್ರಿಟನ್‌ ರಿಟರ್ನ್ಡ್ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 53 ಮಂದಿಗೆ ಪರೀಕ್ಷೆ

Kannadaprabha News   | Asianet News
Published : Jan 03, 2021, 07:56 AM IST
ಬ್ರಿಟನ್‌ ರಿಟರ್ನ್ಡ್ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 53 ಮಂದಿಗೆ ಪರೀಕ್ಷೆ

ಸಾರಾಂಶ

ಬ್ರಿಟನ್‌ ರಿಟನ್ಸ್‌ರ್‍ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದ 53 ಮಂದಿಗೆ ಪರೀಕ್ಷೆ | ಅಷ್ಟೂಜನರಿಗೆ ಸಾಂಸ್ಥಿಕ ಕ್ವಾರಂಟೈನ್‌ | ಸೋಂಕಿತ ಮನೆ ಸುತ್ತ ಸ್ಯಾನಿಟೈಸ್‌

ಬೆಂಗಳೂರು(ಜ.03): ನಗರದಲ್ಲಿ ಶುಕ್ರವಾರ ಪತ್ತೆಯಾದ ಆರಂಭದ ಮೂವರು ರೂಪಾಂತರಿ ಕೋವಿಡ್‌ ಸೋಂಕಿತರು ಒಟ್ಟು 53 ಮಂದಿಯೊಂದಿಗೆ ಪ್ರಾಥಮಿಕ ಹಾಗೂ ಪರೋಕ್ಷ ಸಂಪರ್ಕ ಹೊಂದಿದ್ದು, ಅಷ್ಟೂಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಿ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ರಿಟನ್‌ನಿಂದ ಬೊಮ್ಮನಹಳ್ಳಿಗೆ ಆಗಮಿಸಿದ್ದ ಒಬ್ಬ ಸೋಂಕಿತ ವ್ಯಕ್ತಿಯೊಂದಿಗೆ ಕುಟುಂಬದ ಇಬ್ಬರು ಸದಸ್ಯರು ಪ್ರಾಥಮಿಕ ಸಂಪರ್ಕ ಹೊಂದಿದ್ದು, 35 ಮಂದಿಯೊಂದಿಗೆ ಪರೋಕ್ಷ ಸಂಪರ್ಕ ಹೊಂದಿದ್ದಾರೆ. ಬ್ರಿಟನ್‌ನಿಂದ ರಾಜಾಜಿ ನಗರಕ್ಕೆ ಆಗಮಿಸಿ ಈಗಾಗಲೇ ರೂಪಾಂತರ ಸೋಂಕು ಕಾಣಿಸಿಕೊಂಡ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ತಾಯಿ ಹಾಗೂ ಅಕೆಯ ಮಗಳಿಗೂ ಶುಕ್ರವಾರ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಈ ತಾಯಿ- ಮಗಳು ಆರು ಪ್ರಾಥಮಿಕ ಸಂಪರ್ಕ ಹೊಂದಿದ್ದು, 10 ಮಂದಿ ಪರೋಕ್ಷ ಸಂಪರ್ಕ ಹೊಂದಿದ್ದಾರೆ ಎಂದು ಗುರುತಿಸಲಾಗಿದೆ.

ಕಳೆದ ಸಾಲಿನ ಪಾಸ್‌ ತೋರಿಸಿ ಬಸ್‌ಗಳಲ್ಲಿ ಪ್ರಯಾಣಿಸಿ

ಸಂಪರ್ಕಿತರನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ರೂಪಾಂತರ ಸೋಂಕು ಕಾಣಿಸಿಕೊಂಡ ಸೋಂಕಿತರ ಮನೆ ಸುತ್ತಮುತ್ತ ಪ್ರದೇಶದಲ್ಲಿ ಶನಿವಾರ ಬಿಬಿಎಂಪಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

7 ದಿನ ಅಂಗಡಿ ಬಂದ್‌ ಮಾಡಿದ ಪೊಲೀಸರು

ಬೆಂಗಳೂರು: ರಾಜಾಜಿನಗರದ ಮೊದಲ ಬ್ಲಾಕ್‌ನಲ್ಲಿ ತಾಯಿ ಹಾಗೂ ಮಗಳಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಸೋಂಕಿತರ ಮನೆಯ ಸುತ್ತಮುತ್ತಲಿನ ಅಂಗಡಿ ಮಳಿಗೆಗಳನ್ನು ಶನಿವಾರ ಬಂದ್‌ ಮಾಡಿದ್ದಾರೆ. ಅಲ್ಲದೇ ಮುಂದಿನ ಏಳು ದಿನ ಅಂಗಡಿ ತೆರೆಯದಂತೆ ಸೂಚನೆ ನೀಡಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳೀಯರಿಂದ ಆಕ್ರೋಶ:

ರಾಜಾಜಿನಗರದಲ್ಲಿ ತಾಯಿ ಮಗಳಿಗೆ ರೂಪಾಂತರ ಕೋವಿಡ್‌ ವೈರಾಣು ಕಾಣಿಸಿಕೊಂಡರೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ಸ್ಥಳೀಯರಿಗೆ ಮಾಹಿತಿ ನೀಡಿಲ್ಲ. ಜತೆಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆಯೂ ಜಾಗೃತಿ ಮೂಡಿಲ್ಲ ಎಂದು ರಾಜಾಜಿನಗರ 1ನೇ ಬ್ಲಾಕ್‌ನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!