Covid Crisis: ಕರ್ನಾಟಕದಲ್ಲಿ ಕೊರೋನಾ ಸೋಂಕು ಇಳಿಕೆ, ಪಾಸಿಟಿವಿಟಿ ಏರಿಕೆ

By Govindaraj SFirst Published Jun 21, 2022, 5:00 AM IST
Highlights

ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು ಸತತ ಎರಡನೇ ದಿನ ಇಳಿಕೆಯಾಗಿವೆ. ಆದರೆ, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.3.6ಕ್ಕೆ ಹೆಚ್ಚಿದೆ.

ಬೆಂಗಳೂರು (ಜೂ.21): ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು ಸತತ ಎರಡನೇ ದಿನ ಇಳಿಕೆಯಾಗಿವೆ. ಆದರೆ, ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.3.6ಕ್ಕೆ ಹೆಚ್ಚಿದೆ. ಸೋಮವಾರ 530 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 637 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರ ಸಾವಾಗಿಲ್ಲ. ಸದ್ಯ 4928 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 14 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 3.6ರಷ್ಟುದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆ ಹತ್ತು ಸಾವಿರದಷ್ಟುಕಡಿಮೆಯಾಗಿದೆ. 

ಹೀಗಾಗಿ ಹೊಸ ಪ್ರಕರಣಗಳು 93 ಇಳಿಕೆಯಾಗಿವೆ (ಭಾನುವಾರ 623, ಸಾವು ಶೂನ್ಯ). ಕಳೆದ ವಾರದ ಆರಂಭದಲ್ಲಿ 800 ಗಡಿ ದಾಟಿದ್ದ ಹೊಸ ಪ್ರಕರಣಗಳು, ವಾರಾಂತ್ಯದಲ್ಲಿ 600 ರಿಂದ 800 ಮಧ್ಯೆ ಏರಿಳಿಕೆಯಾಗುತ್ತಿದ್ದವು. ಪರೀಕ್ಷೆಗಳು 10 ಸಾವಿರ ತಗ್ಗಿದ ಪರಿಣಾಮ ಹೊಸ ಪ್ರಕರಣಗಳು ಇಳಿಕೆಯಾಗಿವೆ ಎನ್ನಲಾಗಿದೆ. ಐದು ಸಾವಿರ ಗಡಿ ದಾಟಿದ್ದ ಸಕ್ರಿಯ ಸೋಂಕು ಪ್ರಕರಣಗಳು ಗುಣಮುಖರ ಸಂಖ್ಯೆ ಹೆಚ್ಚಳದಿಂದ ಒಂದಿಷ್ಟುತಗ್ಗಿವೆ. ಸಕ್ರಿಯ ಸೋಂಕಿತರ ಪೈಕಿ 28 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಉಳಿದ 4900 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

ಕರ್ನಾಟಕದಲ್ಲಿ 623 ಹೊಸ ಕೇಸ್‌: ಮತ್ತೆ 5,000 ದಾಟಿದ ಸಕ್ರಿಯ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಈವರೆಗೆ 39.6 ಲಕ್ಷ ಮಂದಿಗೆ ಸೋಂಕು ತಗುಲಿದೆ. 39.1 ಲಕ್ಷ ಮಂದಿ ಗುಣಮುಖರಾಗಿದ್ದು, 40,071 ಮಂದಿ ಸಾವಿಗೀಡಾಗಿದ್ದಾರೆ. ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 494 ಪತ್ತೆಯಾಗಿವೆ. ಉಳಿದಂತೆ ಮೈಸೂರು 6, ದಕ್ಷಿಣ ಕನ್ನಡ ಮತ್ತು ಕಲಬುರಗಿ ತಲಾ 5, ರಾಮನಗರ, ಉತ್ತರ ಕನ್ನಡ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ತಲಾ 3, ಉಡುಪಿಯಲ್ಲಿ ಇಬ್ಬರಿಗೆ, ಬಾಗಲಕೋಟೆ, ಧಾರವಾಡ, ಗದಗ, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರ ತಲಾ ಒಬ್ಬರಿಗೆ ಸೋಂಕು ತಗುಲಿದೆ. 15 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.

ಮಾತನಾಡುವವನಿಗಿಂತ ಮೌನಿಗೆ ಕೋವಿಡ್‌ ಸಾಧ್ಯತೆ..!

ಜೀನೋಮ್‌ ಸೀಕ್ವೆನ್ಸಿಂಗ್‌ ಹೆಚ್ಚಿಸಿ: ದೇಶದಲ್ಲಿ ಕೋವಿಡ್‌ 4ನೇ ಅಲೆ ಅಬ್ಬರ ಹೆಚ್ಚುತ್ತಿರುವ ನಡುವೆಯೇ ‘ಕಳೆದ 7 ದಿನಗಳ ಅವಧಿಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಪ್ರದೇಶಗಳಿಂದ ಹೆಚ್ಚೆಚ್ಚು ಸ್ಯಾಂಪಲ್‌ಗಳನ್ನು ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು’ ಎಂದು ಕೇಂದ್ರ ಸರ್ಕಾರವು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ದೇಶದಲ್ಲಿ ಕೋವಿಡ್‌ ಆರ್ಭಟ ಮತ್ತೆ ಹೆಚ್ಚಾಗುತ್ತಿರುವುದಕ್ಕೆ ಕೊರೋನಾದ ಹೊಸ ರೂಪಾಂತರಿ ಅಥವಾ ಉಪತಳಿ ಕಾರಣವಾಗಿರಬಹುದು ಎಂಬ ಸಾಧ್ಯತೆಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಜಿನೋಮ್‌ ಸೀಕ್ವೆನ್ಸಿಂಗ್‌ ನಡೆಸುವ ಇನ್ಸಾಕೋಗ್‌ ಸೂಚನೆ ನೀಡಿದೆ.

click me!