ಇಂದು (ಬುಧವಾರ) ಒಂದೇ ದಿನ ಕರ್ನಾಟಕದಲ್ಲಿ 2 ಸಾವಿರ ಗಡಿದಾಟಿದ ಕೊರೋನಾ...!

Published : Jul 08, 2020, 08:26 PM ISTUpdated : Jul 08, 2020, 08:30 PM IST
ಇಂದು (ಬುಧವಾರ) ಒಂದೇ ದಿನ ಕರ್ನಾಟಕದಲ್ಲಿ 2 ಸಾವಿರ ಗಡಿದಾಟಿದ ಕೊರೋನಾ...!

ಸಾರಾಂಶ

ಕೊರೋನಾ ಆರ್ಭಟ ಕರ್ನಾಟಕದಲ್ಲಿ ನಿಲ್ಲುತ್ತಿಲ್ಲ. ಬದಲಿಗೆ   ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾದ್ರೆ ಇಂದಿನ (ಜುಲೈ.08) ಅಂಕಿ- ಅಂಶ ಎಷ್ಟು..? ಎನ್ನುವುದನ್ನು ನೋಡಿದುವುದಾದರೆ.

ಬೆಂಗಳೂರು, (ಜುಲೈ.08): ಕರ್ನಾಟಕವನ್ನು ಕೊರೋನಾ ಮಾಹಾಮಾರಿ ಬಿಡದೇ ಕಾಡುತ್ತಿದೆ. ಇಂದು (ಬುಧವಾರ) ಒಂದೇ ದಿನ ಬರೋಬ್ಬರಿ 2,062 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೇ 1148 ಕೇಸ್‌ಗಳು ವರದಿಯಾಗಿವೆ.

ಇದೀಗ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 28,877ಕ್ಕೇರಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 54 ಜನರು ಕೊರೋನಾಗೆ ಬಲಿಯಾಗಿದ್ದಾರೆ. ಇದರಲ್ಲಿ ಬೆಂಗಳೂರಿನಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 470.

ಕೊರೋನಾ ವೈರಸ್‌ಗೆ ತುತ್ತಾದ ಕರ್ನಾಟಕದ ಪ್ರಮುಖ ರಾಜಕಾರಣಿಗಳಿವರು....

ಬುಧವಾರ ಒಟ್ಟು778 ಜನರು ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ 11,87ಕ್ಕೇರಿದೆ. ಸದ್ಯ16,527 ಸಕ್ರಿಯ ಇವೆ.

ಜಿಲ್ಲಾವಾರು ಮಾಹಿತಿ

ಕೊರೋನಾದಿಂದ ಸಾವಿನ ಪ್ರಮಾಣ ರಾಜ್ಯದಲ್ಲಿ 1.3ರಷ್ಟಿದ್ದು, ಬೆಂಗಳೂರಿನಲ್ಲಿ 1.34ರಷ್ಟಿದೆ. ಇನ್ನು ಮಂಗಳವಾರ (ಜುಲೈ.7) ರಾಜ್ಯದಲ್ಲಿ ಒಟ್ಟು 1,498 ಪ್ರಕರಣಗಳು ದಾಖಲಾಗಿದ್ದು, 15 ಮಂದಿ ಸಾವನ್ನಪ್ಪಿದ್ದರು
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ