ಕರ್ನಾಟಕದಲ್ಲಿ ಮುಂಗಾರುಪೂರ್ವ ಮಳೆಗೆ ಮತ್ತೊಬ್ಬ ವ್ಯಕ್ತಿ ಸಾವು

Published : May 24, 2024, 08:05 AM IST
ಕರ್ನಾಟಕದಲ್ಲಿ ಮುಂಗಾರುಪೂರ್ವ ಮಳೆಗೆ ಮತ್ತೊಬ್ಬ ವ್ಯಕ್ತಿ ಸಾವು

ಸಾರಾಂಶ

ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಸಿಡಿಲಿಗೆ ಉ.ಪ್ರದೇಶ ಮೂಲದ ಕಾರ್ಮಿಕ ರಾಜ್ ಚೌಧುರಿ ಎಂಬುವರು ಮೃತಪಟ್ಟಿದ್ದಾರೆ. ಈ ಮಧ್ಯೆ, ಮಂಗಳೂರಿಗೆ ಕುಡಿಯುವ ನೀರು ಪೂರೈಸುವ ತುಂಬೆ ಡ್ಯಾಂ ಭರ್ತಿಯಾಗಿದ್ದು, ಗುರುವಾರ ಒಂದು ಗೇಟ್ ತೆಗೆದು, ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಬೆಂಗಳೂರು(ಮೇ.24):  ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದೆ. ಗುರುವಾರ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮಂಗಳೂರಿನಲ್ಲಿ ಸಿಡಿಲಬ್ಬರದ ಮಳೆಗೆ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.

ಕರಾವಳಿಯಲ್ಲಿ ಮಳೆ ಮುಂದುವರಿದಿದ್ದು, ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಸಿಡಿಲಿಗೆ ಉ.ಪ್ರದೇಶ ಮೂಲದ ಕಾರ್ಮಿಕ ರಾಜ್ ಚೌಧುರಿ (55) ಎಂಬುವರು ಮೃತಪಟ್ಟಿದ್ದಾರೆ. ಈ ಮಧ್ಯೆ, ಮಂಗಳೂರಿಗೆ ಕುಡಿಯುವ ನೀರು ಪೂರೈಸುವ ತುಂಬೆ ಡ್ಯಾಂ ಭರ್ತಿಯಾಗಿದ್ದು, ಗುರುವಾರ ಒಂದು ಗೇಟ್ ತೆಗೆದು, ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಕರ್ನಾಟಕದಲ್ಲಿ 26% ಹೆಚ್ಚು ಮುಂಗಾರುಪೂರ್ವ ಮಳೆ..!

ಕಲಬುರಗಿ ತಾಲೂಕಿನ ಸಿತನೂರಿನಲ್ಲಿ ಸಿಡಿಲಿಗೆ 1 ಎತ್ತು, ಉಡುಪಿ ಜಿಲ್ಲೆ ಕಾಂತಾವರಗಳಲ್ಲಿ ಸಿಡಿಲಿಗೆ 1 ಹಸು ಮೃತಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮದಲ್ಲಿ ಭೀಮನರಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾದ ಕಿರು ಸೇತುವೆ ಮಳೆಗೆ ಕುಸಿದು ಬಿದ್ದಿದೆ. ಯಾದಗಿರಿಯ ಹಲವೆಡೆ ಬಿರುಗಾಳಿ ಮಳೆಗೆ ಮರಗಳು ಉರುಳಿ ಬಿದ್ದು, ಆವಾಂತರ ಸೃಷ್ಟಿಯಾಗಿದೆ. ಬಾಗಲಕೋಟೆ, ಧಾರವಾಡದಲ್ಲಿ ಗುರುವಾರ ಸಂಜೆಯ ವೇಳೆ ಸುರಿದ ಭಾರಿ ಮಳೆಗೆ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿ, ನಿವಾಸಿಗಳು ಪರದಾಡುವಂತಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈ ವರ್ತನೆ ಸರಿಯಲ್ಲ, ಹೈಕೋರ್ಟ್ ಪರಿಗಣಿಸುವ ಮೊದಲು ಕ್ಷಮೆ ಮುಖ್ಯ, ಪ್ರಜ್ವಲ್ ರೇವಣ್ಣ ಅರ್ಜಿಗೆ ಸುಪ್ರೀಂ ಕೆಂಡ!
ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!