
ಬೆಂಗಳೂರು, (ಸೆ.07): ರಾಜ್ಯದಲ್ಲಿ ಇಂದು (ಸೋಮವಾರ) ಒಂದೇ ದಿನ 5773 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 141 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಒಟ್ಟು ಸೊಂಕಿತರ ಸಂಖ್ಯೆ 4,04,324 ಕ್ಕೆ ಏರಿಕೆಯಾಗಿದ್ರೆ, ಮಹಾಮಾರಿಗೆ ಬಲಿಯಾದವರ ಸಂಖ್ಯೆ 6534ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಅನ್ಲಾಕ್ 4.0 ಗೆ ಕರ್ನಾಟಕ ತೆರೆದುಕೊಂಡ ರೀತಿ
ಇನ್ನು ಕಳೆದು 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 8015 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ಒಟ್ಟು 4,04,324 ಪ್ರಕರಣಗಳ ಪೈಕಿ 3,00,770 ಮಂದಿ ಕೋವಿಡ್-19ನಿಂದ ಸಂಪೂರ್ಣ ಗುಣಮುಖರಾಗಿದ್ದು, ಇನ್ನೂ ರಾಜ್ಯದಲ್ಲಿ 97,001 ಸಕ್ರಿಯ ಕೊರೋನಾ ಪ್ರಕರಣಗಳು ಇವೆ.
ಬೆಂಗಳೂರು ನಗರದಲ್ಲಿ ಸೋಮವಾರ 2942 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 48 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ