ಕರ್ನಾಟಕದಲ್ಲಿ ಮಳೆ ಜತೆ ಕೊರೋನಾ ಅಬ್ಬರ: ಇಲ್ಲಿದೆ ಭಾನುವಾರದ ಅಂಕಿ-ಅಂಶ

Published : Aug 09, 2020, 08:54 PM ISTUpdated : Aug 09, 2020, 09:01 PM IST
ಕರ್ನಾಟಕದಲ್ಲಿ ಮಳೆ ಜತೆ ಕೊರೋನಾ ಅಬ್ಬರ: ಇಲ್ಲಿದೆ ಭಾನುವಾರದ ಅಂಕಿ-ಅಂಶ

ಸಾರಾಂಶ

ಭಾನುವಾರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ ನಡೆಸಿದೆ.  ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಎಷ್ಟು ಎನ್ನುವ ಅಂಕಿ-ಅಂಶ ಈ ಕೆಳಗಿನಂತಿದೆ.

ಬೆಂಗಳೂರು, (ಆ.09): ರಾಜ್ಯದಲ್ಲಿ ಇವತ್ತು (ಭಾನುವಾರ) ಒಂದೇ ದಿನ 5985 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಶನಿವಾರ 7,178 ಹೊಸ ಪ್ರಕರಣಗಳು ಪತ್ತೆಯಾಗಿ ದಾಖಲೆ ಸೃಷ್ಟಿಸಿತ್ತು. ಇಂದು (ಶನಿವಾರ) 5,985 ಜನರು ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ 1,78,087 ಕ್ಕೆ ಏರಿಕೆಯಾಗಿದೆ.

ರೈತರಿಗೆ ಮೋದಿ ಆಫರ್, ಕನ್ನಡದಲ್ಲಿ ವಿದ್ಯಾ ಬಾಲನ್ ಆನ್ಸರ್: ಆ.9ರ ಟಾಪ್ 10 ಸುದ್ದಿ! 

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 4670 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 107 ಮಂದಿ ಮೃತಪಟ್ಟಿದ್ದಾರೆ.

ಇದುವರೆಗೆ 93,908 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, ಒಟ್ಟು 3198 ಜನ ಸಾವನ್ನಪ್ಪಿದ್ದಾರೆ. 80,973 ಸಕ್ರಿಯ ಪ್ರಕರಣಗಳಿದ್ದು, 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಅಂಕಿ-ಅಂಶ
ಬೆಂಗಳೂರು 1948, ಮೈಸೂರು 455, ಬಳ್ಳಾರಿ 380, ಉಡುಪಿ 282, ಬೆಳಗಾವಿ 235, ರಾಯಚೂರು 202, ಧಾರವಾಡ 196, ಕಲಬುರಗಿ 194, ಹಾಸನ 168, ದಾವಣಗೆರೆ 158, ಬಾಗಲಕೋಟೆ 149, ಶಿವಮೊಗ್ಗ 149, ದಕ್ಷಿಣ ಕನ್ನಡ 132, ವಿಜಯಪುರ 129, ಗದಗ 114, ಚಿಕ್ಕಮಗಳೂರು 113, ಕೊಪ್ಪಳ 106, ಚಿತ್ರದುರ್ಗ 98, ಬೆಂಗಳೂರು ಗ್ರಾಮಾಂತರ 95, ಯಾದಗಿರಿ 91, ಕೋಲಾರ 87, ಹಾವೇರಿ 80, ತುಮಕೂರು 78, ಬೀದರ್ 70, ಮಂಡ್ಯ 63, ಉತ್ತರ ಕನ್ನಡ 59, ಚಿಕ್ಕಳ್ಳಾಪುರ 47, ಚಾಮರಾಜನಗರ, 47, ರಾಮನಗರ 38 ಕೊಡಗು 22 ಪ್ರಕರಣಗಳು ಪತ್ತೆಯಾಗಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ