6 ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿ?

Published : Jan 16, 2019, 09:30 AM ISTUpdated : Jan 16, 2019, 09:57 AM IST
6 ಬಿಜೆಪಿ ಶಾಸಕರು ಜೆಡಿಎಸ್ ಸಂಪರ್ಕದಲ್ಲಿ?

ಸಾರಾಂಶ

ಹೊಸ ಬಾಂಬ್‌ ಸ್ಫೋಟಿಸಿದ ಸಚಿವ ಸಾರಾ ಮಹೇಶ್‌| ಬಿಜೆಪಿಯವರು ರೆಸಾರ್ಟ್‌ನಿಂದ ಹೊರಬಂದ ಮೇಲೆ ನಮ್ಮ ಆಟ ಶುರು!

ಬೆಂಗಳೂರು[ಜ.16]: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನಕ್ಕೆ ಜೆಡಿಎಸ್‌ ತಿರುಗೇಟು ನೀಡಲು ಮುಂದಾಗಿದ್ದು, ಮೈತ್ರಿ ಪಕ್ಷಗಳ ಶಾಸಕರಿಗೆ ಬಿಜೆಪಿ ಗಾಳ ಹಾಕಿದ ಬೆನ್ನಲ್ಲೇ ಜೆಡಿಎಸ್‌ ಪಕ್ಷವು ಸಹ ಬಿಜೆಪಿಯ ಆರು ಶಾಸಕರನ್ನು ಸೆಳೆಯಲು ಮುಂದಾಗಿದೆ.

ಬಿಜೆಪಿ ಆರು ಶಾಸಕರು ಜೆಡಿಎಸ್‌ನ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸಾ.ರಾ.ಮಹೇಶ್‌ ಹೊಸ ಬಾಂಬ್‌ ಸ್ಫೋಟಿಸಿದ್ದಾರೆ.

ಮಂಗಳವಾರ ರಾತ್ರಿ ಪದ್ಮನಾಭನಗರದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ದೆಹಲಿ ಬಳಿಯ ಗುರುಗ್ರಾಮದ ಹೋಟೆಲ್‌ನಲ್ಲಿರುವ ಶಾಸಕರು ಹೊರಬರಲಿ. ಆಗ ನಮ್ಮ ಸಂಪರ್ಕದಲ್ಲಿರುವ ಆರು ಶಾಸಕರು ಯಾರೆಂಬುದನ್ನು ಬಹಿರಂಗಪಡಿಸಲಾಗುತ್ತದೆ. ಬಿಜೆಪಿಯವರು ಹೊರಬಂದ ಮೇಲೆ ನಮ್ಮ ಆಟ ಶುರುವಾಗುತ್ತದೆ ಎಂದು ತೀಕ್ಷ$್ಣವಾಗಿ ಹೇಳಿದರು.

ಬಿಜೆಪಿಯವರ ಸಂಪರ್ಕದಲ್ಲಿ 6-8 ಶಾಸಕರಿಲ್ಲ. ಪಕ್ಷೇತರರು ಇಬ್ಬರು ಸೇರಿದಂತೆ 3-4 ಶಾಸಕರು ಇರಬಹುದು. ಎಲ್ಲವೂ ಶೀಘ್ರದಲ್ಲಿಯೇ ಬಯಲಾಗುತ್ತದೆ. ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರೇ ರಾಜೀನಾಮೆ ಕೊಡಬಹುದು. ಜೆಡಿಎಸ್‌ ಪಕ್ಷದ ಶಾಸಕರು ಒಗ್ಗಟ್ಟಾಗಿದ್ದಾರೆ. ಸರ್ಕಾರ ಉಳಿಸಲು ನಾವು ಯಾವ ತ್ಯಾಗಕ್ಕೂ ಸಿದ್ಧ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ