ಸಿಹಿ ಸುದ್ದಿ: ರಾಜ್ಯದಲ್ಲಿ ಮತ್ತೆ ಪಾಸಿಟಿವ್‌ಗಿಂತ ಗುಣಮುಖ ಸಂಖ್ಯೆ ಹೆಚ್ಚಳ!

Published : Aug 05, 2020, 07:50 AM ISTUpdated : Aug 05, 2020, 09:19 AM IST
ಸಿಹಿ ಸುದ್ದಿ: ರಾಜ್ಯದಲ್ಲಿ ಮತ್ತೆ ಪಾಸಿಟಿವ್‌ಗಿಂತ ಗುಣಮುಖ ಸಂಖ್ಯೆ ಹೆಚ್ಚಳ!

ಸಾರಾಂಶ

ರಾಜ್ಯದಲ್ಲಿ ದಾಖಲೆಯ 6259 ಜನಕ್ಕೆ ಸೋಂಕು| ಕೊರೋ​ನಾ- ಸಂತಸದ ಸುದ್ದಿ: 6777 ಮಂದಿ ಆಸ್ಪತ್ರೆಯಿಂದ ಡಿಸ್‌ಚಾಜ್‌ರ್‍| ಸೋಂಕು, ಚೇತರಿಕೆ ಎರಡರಲ್ಲೂ ಏಕದಿನದ ದಾಖಲೆ| 110 ಮಂದಿ ಸಾವು

ಬೆಂಗಳೂರು(ಆ.05): ರಾಜ್ಯದಲ್ಲಿ ಸೋಮವಾರ ಕೊಂಚ ಇಳಿಕೆಯಾಗಿದ್ದ ಕೊರೋನಾ ಸೋಂಕು ಮರುದಿನವೇ ದಾಖಲೆ ಸಂಖ್ಯೆಯಲ್ಲಿ ಸ್ಫೋಟಗೊಂಡಿದೆ. ಮಂಗಳವಾರ ಒಂದೇ ದಿನ 6,259 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದೇ ದಿನ ಬೆಂಗಳೂರಿನಲ್ಲಿ 4274 ಜನ ಸೇರಿ ಸೋಂಕಿನಿಂದ ಗುಣಮುಖರಾಗಿ, ರಾಜ್ಯಾದ್ಯಂತ ದಾಖಲೆಯ 6,777 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಳೆದ ಜೂ.30ರಂದು ರಾಜ್ಯದಲ್ಲಿ ಒಂದೇ ದಿನ 6128 ಮಂದಿ ಸೋಂಕು ದೃಢಪಟ್ಟಿದ್ದು, ಜು.3ರಂದು 4776 ಮಂದಿ ಗುಣಮುಖರಾಗಿದ್ದೇ ಈ ವರೆಗಿನ ದಾಖಲೆಯಾಗಿತ್ತು. ಮಂಗಳವಾರ ಸೋಂಕು ಮತ್ತು ಚೇತರಿಕೆ ಎರಡರಲ್ಲೂ ಹೊಸ ದಾಖಲೆಯೊಂದಿಗೆ ರಾಜ್ಯದ ಈ ವರೆಗಿನ ಸೋಂಕಿತರ ಸಂಖ್ಯೆ 1,39,571ಕ್ಕೆ, ಒಟ್ಟು ಗುಣಮುಖರಾದವರ ಸಂಖ್ಯೆ 62,500ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಯಿಂದಲೇ ಸಿಎಂ ಬಿಎಸ್‌ವೈ ಕೆಲಸ: ಚಿಕಿತ್ಸೆ ಪಡೆಯುತ್ತಲೇ ಕಡತ ಪರಿಶೀಲನೆ!

ಇದರ ನಡುವೆ ಸಾವಿನ ಸಂಖ್ಯೆಯೂ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ 30 ಮಂದಿ ಸೇರಿ ರಾಜ್ಯದಲ್ಲಿ ಮಂಗಳವಾರ ಒಟ್ಟು 110 ಸೋಂಕಿತರು ಸಾವನ್ನಪ್ಪಿದ್ದಾರೆ. ತನ್ಮೂಲಕ ಕೋವಿಡ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 2594ಕ್ಕೆ (8 ಅನ್ಯ ಕಾರಣದ ಸಾವು ಹೊರತುಪಡಿಸಿ) ಏರಿಕೆಯಾಗಿದೆ.

ಉಳಿದಂತೆ ಬೆಂಗಳೂರಿನಲ್ಲಿ 36,290 ಮಂದಿ ಸೇರಿ 74,469 ಸಕ್ರಿಯ ಸೋಂಕಿತರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಲ್ಲಿ 322 ಮಂದಿ ಸೇರಿ ಗಂಭೀರ ಆರೋಗ್ಯ ಸ್ಥಿತಿಯ ಒಟ್ಟು 629 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ತಗುಲಿದ ಕೊರೋನಾ ಸೋಂಕು!

ಬೆಂಗಳೂರಲ್ಲೇ 2 ಸಾವಿರಕ್ಕೂ ಹೆಚ್ಚು:

ರಾಜಧಾನಿ ಬೆಂಗಳೂರು ನಗರದಲ್ಲೇ ಮಂಗಳವಾರ ಮತ್ತೆ 2035 ಮಂದಿಗೆ ಸೋಂಕು ದೃಢಪಟ್ಟಿದೆ. ಇತರೆ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 662, ಕಲಬುರಗಿ 285, ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ 225, ದಾವಣಗೆರೆ 191, ಧಾರವಾಡ, ಹಾಸನ ತಲಾ 188, ಚಿಕ್ಕಬಳ್ಳಾಪುರ 171, ಉಡುಪಿ 170, ಕೊಪ್ಪಳ 163, ಹಾವೇರಿ 157, ರಾಯಚೂರು, ಬಾಗಲಕೋಟೆ ತಲಾ 144, ಮಂಡ್ಯ 126, ಬೀದರ್‌ 114, ಗದಗ 96, ಬೆಂಗಳೂರು ಗ್ರಾಮಾಂತರ 82, ತುಮಕೂರು 78, ಯಾದಗಿರಿ 76, ವಿಜಯಪುರ 71, ರಾಮನಗರ 65, ಚಿಕ್ಕಮಗಳೂರು 63, ಉತ್ತರ ಕನ್ನಡ, ಚಾಮರಾಜನಗರ ತಲಾ 57, ಕೋಲಾರ 46, ಕೊಡಗು 31, ಶಿವಮೊಗ್ಗ 15 ಹಾಗೂ ಚಿತ್ರದುರ್ಗದಲ್ಲಿ 12 ಮಂದಿಗೆ ಸೋಂಕು ದೃಢಪಟ್ಟಿದೆ.

ಸಾವು ಎಲ್ಲಿ ಎಷ್ಟು:

ಮಂಗಳವಾರ ಬೆಂಗಳೂರಿನಲ್ಲೇ 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ, ದಕ್ಷಿಣ ಕನ್ನಡದಲ್ಲಿ 13, ಮೈಸೂರಿನಲ್ಲಿ 9, ಧಾರವಾಡ 8, ಉಡುಪಿ 6, ಬಳ್ಳಾರಿ, ದಾವಣಗೆರೆ ತಲಾ 5, ಶಿವಮೊಗ್ಗ 4, ಚಿತ್ರದುರ್ಗ, ಚಾಮರಾಜನಗರ, ಬೀದರ್‌ ತಲಾ 3, ಕಲಬುರಗಿ, ಹಾಸನ, ಚಿಕ್ಕಬಳ್ಳಾಪುರ, ರಾಯಚೂರು, ಮಂಡ್ಯ, ಯಾದಗಿರಿ, ಚಿಕ್ಕಮಗಳೂರು ತಲಾ 2, ವಿಜಯಪುರ, ತುಮಕೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ ಮತ್ತು ಬೆಳಗಾವಿಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 110 ಪ್ರಕರಣಗಳಲ್ಲಿ 19ರಲ್ಲಿ ಸೋಂಕಿನ ಮೂಲ ಪತ್ತೆಯಾಗಿಲ್ಲ. ಉಳಿದ ಪ್ರಕರಣಗಳಲ್ಲಿ ಐಎಲ್‌ಐ, ಸಾರಿ ಮತ್ತು ಇತರೆ ಪೂರ್ವ ಕಾಯಿಲೆಗಳಿಂದ ಸೋಂಕಿತರು ಬಳಲುತ್ತಿದ್ದುದಾಗಿ ಆರೋಗ್ಯ ಇಲಾಖೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗಲಾಟೆ, ದೊಂಬಿ, ಗಲಭೆ ಇಲ್ಲದೆ 518 ಆರೆಸ್ಸೆಸ್‌ ಪಥ ಸಂಚಲನ : ಸರ್ಕಾರ
ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!