ಕರ್ನಾಟಕದಲ್ಲಿ 634 ಹೊಸ ಕೇಸ್‌ ಪತ್ತೆ, 2 ಸಾವು

Published : Jun 18, 2022, 04:30 AM IST
ಕರ್ನಾಟಕದಲ್ಲಿ 634 ಹೊಸ ಕೇಸ್‌ ಪತ್ತೆ, 2 ಸಾವು

ಸಾರಾಂಶ

*  ಈವರೆಗೆ 32 ಜನ ಮಾತ್ರ ಆಸ್ಪತ್ರೆಗೆ *  ಬೆಂಗಳೂರಲ್ಲೇ 610 *  ಒಂದೂವರೆ ತಿಂಗಳ ಬಳಿಕ ಸೋಂಕಿತರ ಸಾವು 2ಕ್ಕೆ ಹೆಚ್ಚಳ  

ಬೆಂಗಳೂರು(ಜೂ.18):  ರಾಜ್ಯದಲ್ಲಿ ಸತತ ಮೂರು ದಿನಗಳ ಬಳಿಕ ಕೊರೋನಾ ಸೋಂಕು ಹೊಸ ಪ್ರಕರಣಗಳು ಕೊಂಚ ಇಳಿಕೆಯಾಗಿದ್ದು, ಶುಕ್ರವಾರ 634 ಜನರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ, ಒಂದೂವರೆ ತಿಂಗಳ (47 ದಿನ) ಬಳಿಕ ಸೋಂಕಿತರ ಸಾವು 2ಕ್ಕೆ ಹೆಚ್ಚಳವಾಗಿದೆ. 

ರಾಜ್ಯದಲ್ಲೀಗ 4528 ಸಕ್ರಿಯ ಸೋಂಕಿತರಿದ್ದಾರೆ. ಆದರೆ, ಅವರ ಪೈಕಿ 32 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದು, ಉಳಿದಂತೆ 4496 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 
ಶುಕ್ರವಾರ 503 ಮಂದಿ ಗುಣಮುಖರಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 23 ವರ್ಷದ ಯುವಕ, ಬೆಂಗಳೂರಿನಲ್ಲಿ 83 ವರ್ಷದ ವೃದ್ಧೆ ಸೋಂಕಿನಿಂದ ಸಾವಿಗೀಡಾಗಿದ್ದಾರೆ. 22,586 ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 2.8ರಷ್ಟು ದಾಖಲಾಗಿದೆ. ಗುರುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳನ್ನು 1500 ಕಡಿಮೆ ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು ಕೂಡಾ 199 ಇಳಿಕೆಯಾಗಿವೆ.

Covid Origin:ಚೀನಾ ಪ್ರಯೋಗಾಲಯದಿಂದ ಕೊರೋನಾ ವೈರಸ್ ಸೋರಿಕೆ ವಾದ ತಳ್ಳಿ ಹಾಕಲ್ಲ: ಡಬ್ಲ್ಯು ಎಚ್ ಒ

ಬೆಂಗಳೂರಲ್ಲೇ 610:

ಹೊಸ ಪ್ರಕರಣಗಳ ಪೈಕಿ ಬೆಂಗಳೂರು ಒಂದರಲ್ಲಿಯೇ 610 (ಶೇ.98 ರಷ್ಟು) ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ 7, ಉಡುಪಿ ಮತ್ತು ಉತ್ತರ ಕನ್ನಡ ತಲಾ 3, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಮೈಸೂರು ತಲಾ ಇಬ್ಬರಿಗೆ, ಬೆಳಗಾವಿ, ಧಾರವಾಡ, ಕಲಬುರಗಿ, ಶಿವಮೊಗ್ಗ ಹಾಗೂ ತುಮಕೂರು ತಲಾ ಒಬ್ಬರಿಗೆ ಸೋಂಕು ತಗುಲಿದೆ. 22 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ವಾರಾದ ಆರಂಭದಲ್ಲಿ 400 ಆಸುಪಾಸಿನಲ್ಲಿ ಹೊಸ ಪ್ರಕರಣಗಳು ಕೇವಲ ಮೂರೇ ದಿನದಲ್ಲಿ ದುಪ್ಪಟ್ಟಾಗಿ 800 ಗಡಿದಾಟಿತ್ತು. ಸದ್ಯ ಇಳಿಕೆಯಾಗಿದೆ. ಶೇ.3.5ಕ್ಕೆ ತಲುಪಿದ್ದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಕೂಡಾ ಶೇ.3ಕ್ಕಿಂತ ಕೆಳಕ್ಕಿಳಿದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!